ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಮ.ನ.ಪಾ ವ್ಯಾಪ್ತಿಯಲ್ಲಿ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತ..!!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಆದೇಶದಿಂದ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತರಾಗಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಮ.ನ.ಪಾ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತೀ ಆರ್ಥಿಕ ವರ್ಷದ ಆರಂಭದಿಂದ ಅಂದರೆ ಏಪ್ರಿಲ್ 30 ರವರೆಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು ಅದರನ್ವಯ ಅನೇಕರು ರಿಯಾಯಿತಿ ಸೌಲಭ್ಯ ಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರವು ಮೇ 9 ರಂದು ಆದೇಶವೊಂದನ್ನು ಹೊರಡಿಸಿ ಜೂನ್ ಅಂತ್ಯದ ವರೆಗೆ 2025-26ನೇ ಸಾಲಿನ ಆಸ್ತಿ ತೆರಿಗೆಯಲ್ಲಿ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸಿದ್ದು ಮನಪಾ ವ್ಯಾಪ್ತಿಯಲ್ಲಿ ಮೇ 11 ರಿಂದ ಅನ್ವಯವಾಗಿದೆ. ಹೀಗಿರುವಾಗ ಮೇ 1 ರಿಂದ 11 ರ ವರೆಗೆ ಮ.ನ.ಪಾ ವ್ಯಾಪ್ತಿಯಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಶೇ.5 ರಷ್ಟು ರಿಯಾಯಿತಿ ನೀಡದೇ ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದವರು ರಿಯಾಯಿತಿ ಸೌಲಭ್ಯದಿಂದ ವಂಚಿತವಾದಂತಾಗಿದೆ. ಈ ಬಗ್ಗೆ ಜನಸಾಮಾನ್ಯರಿಂದ ದೂರುಗಳು ಸಹ ಬರುತ್ತಿವೆ ಎಂದರು.

ಕೂಡಲೇ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಸಂಗ್ರಹಿಸಲಾಗಿರುವ ಹೆಚ್ಚುವರಿ ತೆರಿಗೆಯನ್ನು ಹಿಂತಿರುಗಿಸಬೇಕು ಇಲ್ಲವೇ ಮುಂದಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಸಕ ಕಾಮತ್ ರವರು ಆಗ್ರಹಿಸಿದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!