ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಆದೇಶದಿಂದ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತರಾಗಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಮ.ನ.ಪಾ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತೀ ಆರ್ಥಿಕ ವರ್ಷದ ಆರಂಭದಿಂದ ಅಂದರೆ ಏಪ್ರಿಲ್ 30 ರವರೆಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು ಅದರನ್ವಯ ಅನೇಕರು ರಿಯಾಯಿತಿ ಸೌಲಭ್ಯ ಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರವು ಮೇ 9 ರಂದು ಆದೇಶವೊಂದನ್ನು ಹೊರಡಿಸಿ ಜೂನ್ ಅಂತ್ಯದ ವರೆಗೆ 2025-26ನೇ ಸಾಲಿನ ಆಸ್ತಿ ತೆರಿಗೆಯಲ್ಲಿ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸಿದ್ದು ಮನಪಾ ವ್ಯಾಪ್ತಿಯಲ್ಲಿ ಮೇ 11 ರಿಂದ ಅನ್ವಯವಾಗಿದೆ. ಹೀಗಿರುವಾಗ ಮೇ 1 ರಿಂದ 11 ರ ವರೆಗೆ ಮ.ನ.ಪಾ ವ್ಯಾಪ್ತಿಯಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಶೇ.5 ರಷ್ಟು ರಿಯಾಯಿತಿ ನೀಡದೇ ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದವರು ರಿಯಾಯಿತಿ ಸೌಲಭ್ಯದಿಂದ ವಂಚಿತವಾದಂತಾಗಿದೆ. ಈ ಬಗ್ಗೆ ಜನಸಾಮಾನ್ಯರಿಂದ ದೂರುಗಳು ಸಹ ಬರುತ್ತಿವೆ ಎಂದರು.
ಕೂಡಲೇ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಸಂಗ್ರಹಿಸಲಾಗಿರುವ ಹೆಚ್ಚುವರಿ ತೆರಿಗೆಯನ್ನು ಹಿಂತಿರುಗಿಸಬೇಕು ಇಲ್ಲವೇ ಮುಂದಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಸಕ ಕಾಮತ್ ರವರು ಆಗ್ರಹಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…