ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರಿ : ಸ್ಥಳೀಯರ ಸಕಾಲಿಕ ನೆರವಿನಿಂದ ಬದುಕಿ ಬಂದ ಪ್ರವಾಸಿ ತಂಡ

ಮಳೆ ಶುರುವಾಯಿತೆಂದರೆ ಕರಾವಳಿಯಲ್ಲಿ ಜಲಪಾತಗಳು ಮೈದೋರುತ್ತವೆ. ಇವು ದೂರದಿಂದ ನೋಡಲು ರೋಚಕ ಮತ್ತು ಸುಂದರ. ದ.ಕ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಜಲಪಾತಗಳಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಬಂದವರು ಜಲಪಾತದೆದುರು ತಮ್ಮ ಕೌಶಲ್ಯ ಪ್ರದರ್ಶನಕ್ಕೆ ಮುಂದಾಗಿ ಅಪಾಯಕ್ಕೆ ಸಿಲುಕುತ್ತಾರೆ. ಇಂತಹ ಘಟನೆ ಮೂಡಬಿದ್ರೆ ಸಮೀಪದ ಎರುಗುಂಡಿ ಜಲಪಾತದ ಸಮೀಪ ನಡೆದಿದೆ. ಸ್ಥಳೀಯರು ಹಗ್ಗ ಬಳಸಿ ಜಲಪಾತದ ನಡುವೆ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.

ಮೂಡುಬಿದ್ರಿ ಪಾಲಡ್ಕ ಎರುಗುಂಡಿ ಫಾಲ್ಸ್ ಮಳೆಗಾಲದಲ್ಲಿ ಅಬ್ಬರಿಸುವ ಜಲಪಾತ. ಬಂಡೆಗಳ ನಡುವೆ ಧುಮ್ಮಿಕ್ಕುವ ಜಲಪಾತವನ್ನು ನೋಡಲು ರಾಜ್ಯದ ವಿವಿಧೆಡೆಯಿಂದ ಪ್ರವಾಸಿಗರು ಬರುತ್ತಾರೆ. ಕಾಡಿನ ನಡುವೆ ಇರುವುದರಿಂದ ಜಲಪಾತದವರೆಗೆ ರಸ್ತೆ ಇಲ್ಲ. ನಡೆದುಕೊಂಡು ಸಾಗಬೇಕು. ಇದರಿಂದಾಗಿ ಇಲ್ಲಿ ಪೊಲೀಸರ ನಿಗಾ ಕಡಿಮೆ. ಬರುವ ಪ್ರವಾಸಿಗರು ಮೋಜಿನಾಟದಲ್ಲಿ ಬಂಡೆಗಳ ಮೇಲೆ ಸರ್ಕಸ್ ಮಾಡಲು ತೊಡಗುತ್ತಾರೆ. ಮಳೆ ಬಂದರೆ ಜಲಪಾತಕ್ಕೆ ಹರಿದು ಬರುವ ನೀರಿನ ಪ್ರಮಾಣ ಏಕಾಏಕಿ ಏರುತ್ತದೆ. ಮೋಜಿನಾಟದಲ್ಲಿ ತೊಡಗಿದ್ದವರು ಪ್ರಾಣಾಪಾಯಕ್ಕೆ ಸಿಲುಕುತ್ತಾರೆ. ಇಂತಹ ಘಟನೆ ನಡೆದಾಗ ಸ್ಥಳೀಯರು ಹಗ್ಗ ಕಟ್ಟಿ ಜಲಪಾತದ ನಡುವೆ ಸಿಲುಕಿದವರನ್ನು ರಕ್ಷಿಸಿದ್ದಾರೆ. ಅಪಾಯ ಲೆಕ್ಕಿಸದೆ ಜಲಪಾತದಲ್ಲಿ ನೀರಾಟವಾಡಲು ಹೋಗಿದ್ದ ಪ್ರವಾಸಿಗರು ಅಪಾಯಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿರುವ ಘಟನೆಗಳು ಈ ಹಿಂದೆ ನಡೆದಿವೆ. ಈ ಬಾರಿ ಪ್ರವಾಸಿ ತಂಡದವರ ಅದೃಷ್ಟ ನೆಟ್ಟಗಿತ್ತು. ಸ್ಥಳೀಯರ ಸಕಾಲಿಕ ನೆರವಿನಿಂದ ಬದುಕಿ ಬಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!