ಮಳೆ ಶುರುವಾಯಿತೆಂದರೆ ಕರಾವಳಿಯಲ್ಲಿ ಜಲಪಾತಗಳು ಮೈದೋರುತ್ತವೆ. ಇವು ದೂರದಿಂದ ನೋಡಲು ರೋಚಕ ಮತ್ತು ಸುಂದರ. ದ.ಕ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಜಲಪಾತಗಳಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಬಂದವರು ಜಲಪಾತದೆದುರು ತಮ್ಮ ಕೌಶಲ್ಯ ಪ್ರದರ್ಶನಕ್ಕೆ ಮುಂದಾಗಿ ಅಪಾಯಕ್ಕೆ ಸಿಲುಕುತ್ತಾರೆ. ಇಂತಹ ಘಟನೆ ಮೂಡಬಿದ್ರೆ ಸಮೀಪದ ಎರುಗುಂಡಿ ಜಲಪಾತದ ಸಮೀಪ ನಡೆದಿದೆ. ಸ್ಥಳೀಯರು ಹಗ್ಗ ಬಳಸಿ ಜಲಪಾತದ ನಡುವೆ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.
ಮೂಡುಬಿದ್ರಿ ಪಾಲಡ್ಕ ಎರುಗುಂಡಿ ಫಾಲ್ಸ್ ಮಳೆಗಾಲದಲ್ಲಿ ಅಬ್ಬರಿಸುವ ಜಲಪಾತ. ಬಂಡೆಗಳ ನಡುವೆ ಧುಮ್ಮಿಕ್ಕುವ ಜಲಪಾತವನ್ನು ನೋಡಲು ರಾಜ್ಯದ ವಿವಿಧೆಡೆಯಿಂದ ಪ್ರವಾಸಿಗರು ಬರುತ್ತಾರೆ. ಕಾಡಿನ ನಡುವೆ ಇರುವುದರಿಂದ ಜಲಪಾತದವರೆಗೆ ರಸ್ತೆ ಇಲ್ಲ. ನಡೆದುಕೊಂಡು ಸಾಗಬೇಕು. ಇದರಿಂದಾಗಿ ಇಲ್ಲಿ ಪೊಲೀಸರ ನಿಗಾ ಕಡಿಮೆ. ಬರುವ ಪ್ರವಾಸಿಗರು ಮೋಜಿನಾಟದಲ್ಲಿ ಬಂಡೆಗಳ ಮೇಲೆ ಸರ್ಕಸ್ ಮಾಡಲು ತೊಡಗುತ್ತಾರೆ. ಮಳೆ ಬಂದರೆ ಜಲಪಾತಕ್ಕೆ ಹರಿದು ಬರುವ ನೀರಿನ ಪ್ರಮಾಣ ಏಕಾಏಕಿ ಏರುತ್ತದೆ. ಮೋಜಿನಾಟದಲ್ಲಿ ತೊಡಗಿದ್ದವರು ಪ್ರಾಣಾಪಾಯಕ್ಕೆ ಸಿಲುಕುತ್ತಾರೆ. ಇಂತಹ ಘಟನೆ ನಡೆದಾಗ ಸ್ಥಳೀಯರು ಹಗ್ಗ ಕಟ್ಟಿ ಜಲಪಾತದ ನಡುವೆ ಸಿಲುಕಿದವರನ್ನು ರಕ್ಷಿಸಿದ್ದಾರೆ. ಅಪಾಯ ಲೆಕ್ಕಿಸದೆ ಜಲಪಾತದಲ್ಲಿ ನೀರಾಟವಾಡಲು ಹೋಗಿದ್ದ ಪ್ರವಾಸಿಗರು ಅಪಾಯಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿರುವ ಘಟನೆಗಳು ಈ ಹಿಂದೆ ನಡೆದಿವೆ. ಈ ಬಾರಿ ಪ್ರವಾಸಿ ತಂಡದವರ ಅದೃಷ್ಟ ನೆಟ್ಟಗಿತ್ತು. ಸ್ಥಳೀಯರ ಸಕಾಲಿಕ ನೆರವಿನಿಂದ ಬದುಕಿ ಬಂದಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…