ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಮಂಗಳೂರು ನಗರದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮುಂಗಾರು ಮಳೆ ಈ ಬಾರಿ ಕರ್ನಾಟಕ ಕರಾವಳಿಯನ್ನು ನಿಗದಿತ ಅವಧಿಗೆ ಮುಂಚಿತವಾಗಿಯೇ ಪ್ರವೇಶಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಕಾಲುವೆಗಳ, ತೋಡುಗಳ ಹೂಳೆತ್ತುವಿಕೆ ಕಾರ್ಯವನ್ನು ಕೈಗೊಳ್ಳದಿರುವುದರಿಂದ ನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ರಸ್ತೆಗಳಲ್ಲಿ ನೆರೆಯನ್ನು ಸೃಷ್ಟಿಸುತ್ತಿದೆ. ಇದರಿಂದ ಸಂಚಾರ ವ್ಯತ್ಯಯಗೊಳ್ಳುತ್ತಿದೆ. ಮಂಗಳೂರಿನ ಪಂಪ್ ವೆಲ್ ಈ ಬಾರಿಯೂ ವರ್ಷಪ್ರತಿಯ ಸಮಸ್ಯೆಯಾದ ನೆರೆ ನೀರು ನಿಲ್ಲುವ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಸಾಗುವ ವಾಹನ ಸವಾರರು ಕಷ್ಟಪಡಬೇಕಾಯಿತು. ಇಲ್ಲಿ ಕಾಲುವೆಯನ್ನು ಅತಿಕ್ರಮಿಸಿ ಕಟ್ಟಡಗಳನ್ನು ಕಟ್ಟುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಹಿಂದೆ ಇದ್ದ ತೋಡಿನ ಅಗಲ ಕಿರಿದಾಗಿದೆ. ಇದರಿಂದ ನಾಲ್ಕು ಕಡೆಯಿಂದ ಪಂಪ್ ವೆಲ್ ಪ್ಲೈಓವರಿನತ್ತ ಬರುವ ನೀರು ರಸ್ತೆಯಲ್ಲಿ ನಿಂತು ಬಿಡುತ್ತದೆ.

ಜಿಲ್ಲೆಯಾದ್ಯಂತ ಮುಂಗಾರು ಮಳೆ ಅನಾಹುತಗಳನ್ನು ಉಂಟು ಮಾಡಿದೆ. ನಗರ ಹಾಗು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಉರುಳಿವೆ. ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ತಡೆಯುಂಟಾಗಿದೆ. ಮರಗಳು ಉರುಳಿ ವಾಹನಗಳು ಜಖಂಗೊOಡಿವೆ. ಮನೆಗಳಿಗೆ ನೀರು ನುಗ್ಗಿ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ, ವಿದ್ಯುತ್ ಮತ್ತು ವಿದ್ಯುನ್ಮಾನ ಉಪಕರಣಗಳು ಹಾಳಾಗಿವೆ. ಗುಡ್ಡ ನೆಲಸಮ ಮಾಡಿದ, ರಸ್ತೆ ಮಾಡಿದ ಸ್ಥಳಗಳಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತಗಳು ಸಂಭವಿಸಿವೆ. ಮಣ್ಣು ಜರಿದು ಮನೆಯ ಗೋಡೆಗಳಿಗೆ ಹಾನಿಯಾಗಿದೆ.ಕಾಂಪೌOಡು ಗೋಡೆಗಳು ಕುಸಿದಿವೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!