ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಮಂಗಳೂರು ನಗರದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮುಂಗಾರು ಮಳೆ ಈ ಬಾರಿ ಕರ್ನಾಟಕ ಕರಾವಳಿಯನ್ನು ನಿಗದಿತ ಅವಧಿಗೆ ಮುಂಚಿತವಾಗಿಯೇ ಪ್ರವೇಶಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಕಾಲುವೆಗಳ, ತೋಡುಗಳ ಹೂಳೆತ್ತುವಿಕೆ ಕಾರ್ಯವನ್ನು ಕೈಗೊಳ್ಳದಿರುವುದರಿಂದ ನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ರಸ್ತೆಗಳಲ್ಲಿ ನೆರೆಯನ್ನು ಸೃಷ್ಟಿಸುತ್ತಿದೆ. ಇದರಿಂದ ಸಂಚಾರ ವ್ಯತ್ಯಯಗೊಳ್ಳುತ್ತಿದೆ. ಮಂಗಳೂರಿನ ಪಂಪ್ ವೆಲ್ ಈ ಬಾರಿಯೂ ವರ್ಷಪ್ರತಿಯ ಸಮಸ್ಯೆಯಾದ ನೆರೆ ನೀರು ನಿಲ್ಲುವ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಸಾಗುವ ವಾಹನ ಸವಾರರು ಕಷ್ಟಪಡಬೇಕಾಯಿತು. ಇಲ್ಲಿ ಕಾಲುವೆಯನ್ನು ಅತಿಕ್ರಮಿಸಿ ಕಟ್ಟಡಗಳನ್ನು ಕಟ್ಟುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಹಿಂದೆ ಇದ್ದ ತೋಡಿನ ಅಗಲ ಕಿರಿದಾಗಿದೆ. ಇದರಿಂದ ನಾಲ್ಕು ಕಡೆಯಿಂದ ಪಂಪ್ ವೆಲ್ ಪ್ಲೈಓವರಿನತ್ತ ಬರುವ ನೀರು ರಸ್ತೆಯಲ್ಲಿ ನಿಂತು ಬಿಡುತ್ತದೆ.

ಜಿಲ್ಲೆಯಾದ್ಯಂತ ಮುಂಗಾರು ಮಳೆ ಅನಾಹುತಗಳನ್ನು ಉಂಟು ಮಾಡಿದೆ. ನಗರ ಹಾಗು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಉರುಳಿವೆ. ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ತಡೆಯುಂಟಾಗಿದೆ. ಮರಗಳು ಉರುಳಿ ವಾಹನಗಳು ಜಖಂಗೊOಡಿವೆ. ಮನೆಗಳಿಗೆ ನೀರು ನುಗ್ಗಿ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ, ವಿದ್ಯುತ್ ಮತ್ತು ವಿದ್ಯುನ್ಮಾನ ಉಪಕರಣಗಳು ಹಾಳಾಗಿವೆ. ಗುಡ್ಡ ನೆಲಸಮ ಮಾಡಿದ, ರಸ್ತೆ ಮಾಡಿದ ಸ್ಥಳಗಳಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತಗಳು ಸಂಭವಿಸಿವೆ. ಮಣ್ಣು ಜರಿದು ಮನೆಯ ಗೋಡೆಗಳಿಗೆ ಹಾನಿಯಾಗಿದೆ.ಕಾಂಪೌOಡು ಗೋಡೆಗಳು ಕುಸಿದಿವೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!