ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಮಂಗಳೂರು ನಗರದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮುಂಗಾರು ಮಳೆ ಈ ಬಾರಿ ಕರ್ನಾಟಕ ಕರಾವಳಿಯನ್ನು ನಿಗದಿತ ಅವಧಿಗೆ ಮುಂಚಿತವಾಗಿಯೇ ಪ್ರವೇಶಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಕಾಲುವೆಗಳ, ತೋಡುಗಳ ಹೂಳೆತ್ತುವಿಕೆ ಕಾರ್ಯವನ್ನು ಕೈಗೊಳ್ಳದಿರುವುದರಿಂದ ನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ರಸ್ತೆಗಳಲ್ಲಿ ನೆರೆಯನ್ನು ಸೃಷ್ಟಿಸುತ್ತಿದೆ. ಇದರಿಂದ ಸಂಚಾರ ವ್ಯತ್ಯಯಗೊಳ್ಳುತ್ತಿದೆ. ಮಂಗಳೂರಿನ ಪಂಪ್ ವೆಲ್ ಈ ಬಾರಿಯೂ ವರ್ಷಪ್ರತಿಯ ಸಮಸ್ಯೆಯಾದ ನೆರೆ ನೀರು ನಿಲ್ಲುವ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಸಾಗುವ ವಾಹನ ಸವಾರರು ಕಷ್ಟಪಡಬೇಕಾಯಿತು. ಇಲ್ಲಿ ಕಾಲುವೆಯನ್ನು ಅತಿಕ್ರಮಿಸಿ ಕಟ್ಟಡಗಳನ್ನು ಕಟ್ಟುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಹಿಂದೆ ಇದ್ದ ತೋಡಿನ ಅಗಲ ಕಿರಿದಾಗಿದೆ. ಇದರಿಂದ ನಾಲ್ಕು ಕಡೆಯಿಂದ ಪಂಪ್ ವೆಲ್ ಪ್ಲೈಓವರಿನತ್ತ ಬರುವ ನೀರು ರಸ್ತೆಯಲ್ಲಿ ನಿಂತು ಬಿಡುತ್ತದೆ.
ಜಿಲ್ಲೆಯಾದ್ಯಂತ ಮುಂಗಾರು ಮಳೆ ಅನಾಹುತಗಳನ್ನು ಉಂಟು ಮಾಡಿದೆ. ನಗರ ಹಾಗು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಉರುಳಿವೆ. ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ತಡೆಯುಂಟಾಗಿದೆ. ಮರಗಳು ಉರುಳಿ ವಾಹನಗಳು ಜಖಂಗೊOಡಿವೆ. ಮನೆಗಳಿಗೆ ನೀರು ನುಗ್ಗಿ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ, ವಿದ್ಯುತ್ ಮತ್ತು ವಿದ್ಯುನ್ಮಾನ ಉಪಕರಣಗಳು ಹಾಳಾಗಿವೆ. ಗುಡ್ಡ ನೆಲಸಮ ಮಾಡಿದ, ರಸ್ತೆ ಮಾಡಿದ ಸ್ಥಳಗಳಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತಗಳು ಸಂಭವಿಸಿವೆ. ಮಣ್ಣು ಜರಿದು ಮನೆಯ ಗೋಡೆಗಳಿಗೆ ಹಾನಿಯಾಗಿದೆ.ಕಾಂಪೌOಡು ಗೋಡೆಗಳು ಕುಸಿದಿವೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…