ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಮಂಗಳೂರು ನಗರದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮುಂಗಾರು ಮಳೆ ಈ ಬಾರಿ ಕರ್ನಾಟಕ ಕರಾವಳಿಯನ್ನು ನಿಗದಿತ ಅವಧಿಗೆ ಮುಂಚಿತವಾಗಿಯೇ ಪ್ರವೇಶಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಕಾಲುವೆಗಳ, ತೋಡುಗಳ ಹೂಳೆತ್ತುವಿಕೆ ಕಾರ್ಯವನ್ನು ಕೈಗೊಳ್ಳದಿರುವುದರಿಂದ ನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ರಸ್ತೆಗಳಲ್ಲಿ ನೆರೆಯನ್ನು ಸೃಷ್ಟಿಸುತ್ತಿದೆ. ಇದರಿಂದ ಸಂಚಾರ ವ್ಯತ್ಯಯಗೊಳ್ಳುತ್ತಿದೆ. ಮಂಗಳೂರಿನ ಪಂಪ್ ವೆಲ್ ಈ ಬಾರಿಯೂ ವರ್ಷಪ್ರತಿಯ ಸಮಸ್ಯೆಯಾದ ನೆರೆ ನೀರು ನಿಲ್ಲುವ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಸಾಗುವ ವಾಹನ ಸವಾರರು ಕಷ್ಟಪಡಬೇಕಾಯಿತು. ಇಲ್ಲಿ ಕಾಲುವೆಯನ್ನು ಅತಿಕ್ರಮಿಸಿ ಕಟ್ಟಡಗಳನ್ನು ಕಟ್ಟುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಹಿಂದೆ ಇದ್ದ ತೋಡಿನ ಅಗಲ ಕಿರಿದಾಗಿದೆ. ಇದರಿಂದ ನಾಲ್ಕು ಕಡೆಯಿಂದ ಪಂಪ್ ವೆಲ್ ಪ್ಲೈಓವರಿನತ್ತ ಬರುವ ನೀರು ರಸ್ತೆಯಲ್ಲಿ ನಿಂತು ಬಿಡುತ್ತದೆ.
ಜಿಲ್ಲೆಯಾದ್ಯಂತ ಮುಂಗಾರು ಮಳೆ ಅನಾಹುತಗಳನ್ನು ಉಂಟು ಮಾಡಿದೆ. ನಗರ ಹಾಗು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಉರುಳಿವೆ. ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ತಡೆಯುಂಟಾಗಿದೆ. ಮರಗಳು ಉರುಳಿ ವಾಹನಗಳು ಜಖಂಗೊOಡಿವೆ. ಮನೆಗಳಿಗೆ ನೀರು ನುಗ್ಗಿ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ, ವಿದ್ಯುತ್ ಮತ್ತು ವಿದ್ಯುನ್ಮಾನ ಉಪಕರಣಗಳು ಹಾಳಾಗಿವೆ. ಗುಡ್ಡ ನೆಲಸಮ ಮಾಡಿದ, ರಸ್ತೆ ಮಾಡಿದ ಸ್ಥಳಗಳಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತಗಳು ಸಂಭವಿಸಿವೆ. ಮಣ್ಣು ಜರಿದು ಮನೆಯ ಗೋಡೆಗಳಿಗೆ ಹಾನಿಯಾಗಿದೆ.ಕಾಂಪೌOಡು ಗೋಡೆಗಳು ಕುಸಿದಿವೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…