ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಿರ್ವದ ಬಿಳಿಯಾರಿನಲ್ಲಿ ನಾಲ್ಕು ದಿನಗಳಿಂದ ಕರೆಂಟ್ ಇಲ್ಲದೆ ಬಿಳಿಯಾರು ಗ್ರಾಮಸ್ಥರ ಪರದಾಟ

ಶಿರ್ವ ವ್ಯಾಪ್ತಿಯ ಕುರ್ಕಾಲು ಗ್ರಾಮ ಪಂಚಾಯತ್ ಕುಂಜಾರು ಗಿರಿಯ ಬಿಳಿಯಾರು ಪರಿಸರದಲ್ಲಿ ಸುಮಾರು 4 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಇಲ್ಲದೆ ನೀರಿನ ಅಭಾವದ ಜೊತೆಗೆ ಮನೆಯ ಫ್ರಿಜ್ ನಲ್ಲಿಟ್ಟಿದ್ದ ದಿನಬಳಕೆಯ ಸಾಮಗ್ರಿಗಳು ಕೂಡ ಹಾಳಾಗಿವೆ. ರಾತ್ರಿಯಿಡಿ ನಿದ್ದೆ ಇಲ್ಲದೆ ಜನರು ಸಾಕಷ್ಟು ತೊಂದರೆ ಅನುಭವಿಸಿದರು. ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಹೀಗಾಗಿ ಇಂದು ಗ್ರಾಮಸ್ಥರು ಮತ್ತು ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎಂ.ಜಿ ನಾಗೇಂದ್ರ ನೇತೃತ್ವದಲ್ಲಿ ಶಿರ್ವ ಮೆಸ್ಕಾಂ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು.

ಮೆಸ್ಕಾಂ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ ಗ್ರಾಮಸ್ಥರು ಮತ್ತು ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಹೇಶ್ ಶೆಟ್ಟಿ ಬಿಳಿಯಾರು ಅವರು ಅಧಿಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಮೆಸ್ಕಾಂ ಸಿಬ್ಬಂದಿ ಕೊರತೆಯಿಂದಾಗಿ ಸಮಸ್ಯೆ ಆಗಿದೆ. ಈ ಭಾಗದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದರು. ಇದರಿಂದ ಗ್ರಾಮಸ್ಥರು ಸಮಾಧಾನಗೊಂಡರು. ಕುರ್ಕಾಲು ಗ್ರಾಮ ಪಂಚಾಯತ್ ಸದಸ್ಯೆ ಸಿಮಿ ಡಿಸೋಜಾ, ಸ್ಥಳೀಯರಾದ ಸುರೇಶ್ ಕುರ್ಕಾಲು ಹಾಗೂ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!