ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ ೩೧ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ ೯ಗಂಟೆಗೆ ಕಲಾವಿದರಿಗೆ ಕೆಎಮ್ಸಿ ಮಣಿಪಾಲ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ ೧೦ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ ೧೦.೩೦ಕ್ಕೆ ಮಾಧವ ಮಾತೃ ಗ್ರಾಮಂ ಕೂಡಿಯಾಟ್ಟಂ ಗುರುಕುಲಂ ಇಜ್ಜೌಲಕುಡ, ತ್ರಿಶೂರ್ ಇವರಿಂದ “ಕೂಡಿಯಾಟ್ಟಂ”, “ಸೀತಾಪಹರಣಂ-ಜಟಾಯುವಧA” ಪ್ರದರ್ಶನಗೊಳ್ಳಲಿದೆ. ೧೧.೩೦ಕ್ಕೆ ಯಕ್ಷಗಾನ ಕಲಾವಿದರಿಗೆ “ಕಲೆ ಪೂರ್ಣಾವಧಿ ಉದ್ಯೋಗವಾಗಿರಬೇಕೆ.. ಉಪವೃತ್ತಿಯಾಗಿರಬೇಕೆ..?” ವಿಷಯದ ಕುರಿತು ಚರ್ಚೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಲಾರAಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಮಧ್ಯಾಹ್ನ ೨.೩೦ಕ್ಕೆ ನಡೆಯುವ ಸಮಾರೋಪದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಶ್ರೀ ಸುಶೀಂಧ್ರತೀರ್ಥರು ೫೦ ಮಂದಿ ಹಿರಿಯ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಆರ್ಶೀವಚನ ನೀಡಲಿದ್ದಾರೆ. ಉದ್ಯಮಿ ಡಾ.ಜಿ.ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಸುವರ್ಣ ಉಡುಗೊರೆ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಸದಾಶಿವ ರಾವ್ ಉಪಸ್ಥಿತರಿದ್ದರು.
===========================
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…