ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ ೩೧ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ ೯ಗಂಟೆಗೆ ಕಲಾವಿದರಿಗೆ ಕೆಎಮ್ಸಿ ಮಣಿಪಾಲ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ ೧೦ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ ೧೦.೩೦ಕ್ಕೆ ಮಾಧವ ಮಾತೃ ಗ್ರಾಮಂ ಕೂಡಿಯಾಟ್ಟಂ ಗುರುಕುಲಂ ಇಜ್ಜೌಲಕುಡ, ತ್ರಿಶೂರ್ ಇವರಿಂದ “ಕೂಡಿಯಾಟ್ಟಂ”, “ಸೀತಾಪಹರಣಂ-ಜಟಾಯುವಧA” ಪ್ರದರ್ಶನಗೊಳ್ಳಲಿದೆ. ೧೧.೩೦ಕ್ಕೆ ಯಕ್ಷಗಾನ ಕಲಾವಿದರಿಗೆ “ಕಲೆ ಪೂರ್ಣಾವಧಿ ಉದ್ಯೋಗವಾಗಿರಬೇಕೆ.. ಉಪವೃತ್ತಿಯಾಗಿರಬೇಕೆ..?” ವಿಷಯದ ಕುರಿತು ಚರ್ಚೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಲಾರAಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಮಧ್ಯಾಹ್ನ ೨.೩೦ಕ್ಕೆ ನಡೆಯುವ ಸಮಾರೋಪದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಶ್ರೀ ಸುಶೀಂಧ್ರತೀರ್ಥರು ೫೦ ಮಂದಿ ಹಿರಿಯ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಆರ್ಶೀವಚನ ನೀಡಲಿದ್ದಾರೆ. ಉದ್ಯಮಿ ಡಾ.ಜಿ.ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಸುವರ್ಣ ಉಡುಗೊರೆ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಸದಾಶಿವ ರಾವ್ ಉಪಸ್ಥಿತರಿದ್ದರು.
===========================
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…