ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ಮುಂಜಾವಿನ ವೇಳೆ ನಡೆದಿದೆ.

ಮಂಚಿ ಕೊಳ್ನಾಡು ನೂಜಿ ನಿವಾಸಿ ಜಯರಾಮ್ (57) ಮೃತಪಟ್ಟ ವ್ಯಕ್ತಿ. ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ನಡೆಸುತ್ತಿರುವ ಜಯರಾಮ್ ಅವರು ಬೆಳಿಗ್ಗೆ 4.30 ರ ಸಮಯದಲ್ಲಿ ಮನೆಯಿಂದ ಮಂಗಳೂರಿಗೆ ಮಾರುತಿ 800 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಜೋರಾಗಿ ಸುರಿಯುತ್ತಿದ್ದ ಮಳೆಗೆ ಕಾರು ನಿಯಂತ್ರಣ ಕಳೆದುಕೊಂಡು ಬಿಸಿರೋಡಿನ ಡಿ.ಪಿ.ಸ್ಟೋರ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊ0ಡಿದೆ. ಚಾಲಕ ಕೆಲಹೊತ್ತು ಸೀಟಿನಲ್ಲಿ ಸಿಲುಕಿಕೊಂಡಿದ್ದ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



