ಉಪ್ಪಿನಂಗಡಿ-ಉಪ್ಪಿನ0ಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊ0ಡಿದೆ.
ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಬ್ದುಲ್ ಸಲಿಂ ಎಂಬವರು ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ರು. ಅದರೊಳಗೆ ಅಬ್ದುಲ್ ರಹಿಮಾನ್, ರಮ್ಲಾನ್, ಅಬ್ಬಾಸ್ ಎಂಬವರು ಕುಳಿತು ಮಾತನಾಡಿಕೊಳ್ಳುತ್ತಿದ್ರು. ಅಷ್ಟರಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮಾವಿನ ಮರ ವಾಲತೊಡಗುವುದನ್ನು ಗಮನಿಸಿದ ಇವರುಗಳು ಅದರಿಂದ ಇಳಿದು ಓಡಿ ಹೋಗಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಸಂಜೆ ಬೀಸಿದ ಗಾಳಿ ಮಳೆಗೆ ಮಾವಿನ ಮರ ಬುಡ ಸಮೇತ ನೆರಕ್ಕುರುಳಿ ಬಿದ್ದಿದ್ದು, 100 ಮೀಟರ್ ದೂರದ ತನಕ ರಸ್ತೆಯಲ್ಲಿ ವಿಸ್ತಾರವಾಗಿ ಬಿದ್ದುಕೊಂಡಿತ್ತು. ಸ್ಥಳೀಯ ಯುವಕರು ಮರ ತುಂಡರಿಸುವ ಯಂತ್ರ ತಂದು ರಸ್ತೆಯನ್ನು ತೆರವುಗೊಳಿಸಿದ್ದಾರೆ. ಬಳಿಕ ಕಾರಿನ ಮೇಲೆ ಇದ್ದ ಮರವನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಯಿತು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…