ಉಪ್ಪಿನಂಗಡಿ-ಉಪ್ಪಿನ0ಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊ0ಡಿದೆ.
ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಬ್ದುಲ್ ಸಲಿಂ ಎಂಬವರು ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ರು. ಅದರೊಳಗೆ ಅಬ್ದುಲ್ ರಹಿಮಾನ್, ರಮ್ಲಾನ್, ಅಬ್ಬಾಸ್ ಎಂಬವರು ಕುಳಿತು ಮಾತನಾಡಿಕೊಳ್ಳುತ್ತಿದ್ರು. ಅಷ್ಟರಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮಾವಿನ ಮರ ವಾಲತೊಡಗುವುದನ್ನು ಗಮನಿಸಿದ ಇವರುಗಳು ಅದರಿಂದ ಇಳಿದು ಓಡಿ ಹೋಗಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಸಂಜೆ ಬೀಸಿದ ಗಾಳಿ ಮಳೆಗೆ ಮಾವಿನ ಮರ ಬುಡ ಸಮೇತ ನೆರಕ್ಕುರುಳಿ ಬಿದ್ದಿದ್ದು, 100 ಮೀಟರ್ ದೂರದ ತನಕ ರಸ್ತೆಯಲ್ಲಿ ವಿಸ್ತಾರವಾಗಿ ಬಿದ್ದುಕೊಂಡಿತ್ತು. ಸ್ಥಳೀಯ ಯುವಕರು ಮರ ತುಂಡರಿಸುವ ಯಂತ್ರ ತಂದು ರಸ್ತೆಯನ್ನು ತೆರವುಗೊಳಿಸಿದ್ದಾರೆ. ಬಳಿಕ ಕಾರಿನ ಮೇಲೆ ಇದ್ದ ಮರವನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಯಿತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…