ಇತರೆ

ಮಂಗಳೂರು: ಬಜಪೆ ಚಲೋ ನಡೆಸಿದ್ದಕ್ಕಾಗಿ ಬಜಪೆ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು..??!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬಜಪೆ ಪೇಟೆಯ ಶಾರದಾ ಮಂಟಪದ ಬಳಿ ನಡೆದ ಬೃಹತ್ ಜನಾಗ್ರಹ ಸಮಾವೇಶಕ್ಕೆ ಪೊಲೀಸ್ ಅನುಮತಿ ಪಡೆದಿಲ್ಲ ಹಾಗೂ ಸಮಾವೇಶದಲ್ಲಿ ಭಾಗವಹಿಸಿದ ಮುಖ್ಯ ಭಾಷಣಕಾರಾರ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಜಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಜಪೆ ಠಾಣೆಯ ಕಾನ್‌ಸ್ಟೇಬಲ್ ಚಿದಾನಂದ ಕಟೆ ಅವರು ದೂರು ದಾಖಲಿಸಿದ್ದು, ಬಜಪೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗಳದ ವತಿಯಿಂದ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಸುಮಾರು 3 ಸಾವಿರ ಮಂದಿ ಭಾಗವಹಿಸಿದ್ದಾರೆ. ಕಾರ್ಯಕ್ರಮ ಆಯೋಜನೆಗಾಗಲೀ ಅಥವಾ ಧ್ವನಿವರ್ಧಕ ಬಳಸುವುದಕ್ಕಾಗಲೀ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ.

ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಬಜಪೆ ಪೇಟೆಯ ಬಸ್ಸು ನಿಲ್ದಾಣಕ್ಕೆ ಬರುವ ಮತ್ತು ನಿಲ್ದಾಣದಿಂದ ಹೊರಹೋಗುವ ರಸ್ತೆಯನ್ನು ಉದ್ದೇಶ ಪೂರ್ವಕವಾಗಿ ಅಕ್ರಮ ಕೂಟ ಕಟ್ಟಿಕೊಂಡು ತಡೆದಿದ್ದಾರೆ. ರಾಜ್ಯ ಹೆದ್ದಾರಿ 67ರ ಇಕ್ಕೆಲಗಳಲ್ಲಿ ಮತ್ತು ಹೆದ್ದಾರಿಯ ಮಧ್ಯದಲ್ಲಿಯೂ ನಿಂತು ವಾಹನಗಳು ಮತ್ತು ಜನ ಸಾಮಾನ್ಯರ ಮುಕ್ತ ಓಡಾಟಕ್ಕೆ ಅಡ್ಡಿಪಡಿಸಿದ್ದಾರೆ. ಸಭೆಯಲ್ಲಿ ಓರ್ವ ಭಾಷಣಕಾರ ಧರ್ಮ-ಧರ್ಮಗಳ ನಡುವೆ ದ್ವೇಷವನ್ನು ಉಂಟುಮಾಡಿ, ಗಲಭೆ ಸೃಷ್ಟಿಸುವ ಹಾಗೂ ಜೀವ ಬೆದರಿಕೆ ಹಾಕುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ.

ಭಾಷಣಕಾರರು ಮತ್ತು ಸಂಘಟಕರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಬಜಪೆ ಪೊಲೀಸರ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

10 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

10 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

11 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

16 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

16 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago