ರಾಜಸ್ಥಾನದ ಆಜ್ಮೀರ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರದ ಡಾ.ಜೋನ್ ಕರ್ವಾಲ್ಲೊ ಅವರು ತಮ್ಮ ಹುಟ್ಟೂರಿನಲ್ಲಿ ಪ್ರಥಮ ಕೃತಜ್ಞಾತಾ ಬಲಿಪೂಜೆ ಅರ್ಪಿಸಿದ್ದಾರೆ.
ಧಾರಾಕಾರ ಮಳೆಯ ನಡುವೆಯೂ ಸಹ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ, ಬಳ್ಳಾರಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಹೆನ್ರಿ ಡಿಸೋಜಾ, ಜೈಪುರ್ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಓಸ್ವಲ್ಡ್ ಜೆ ಲೂವಿಸ್, ಕಾರವಾರ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ದುಮಿAಗ್ ಡಯಾಸ್, ಹಲವಾರು ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತಾದಿಗಳೊಂದಿಗೆ ಕೃತಜ್ಞಾತಾ ಬಲಿಪೂಜೆಯೊಂದಿಗೆ ದೇವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನೂತನ ಧರ್ಮಾಧ್ಯಕ್ಷರಾದ ವಂ|ಡಾ|ಜೋನ್ ಕರ್ವಾಲ್ಲೊ ಅವರಿಗೆ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರದ ವತಿಯಿಂದ, ಧರ್ಮಾಧ್ಯಕ್ಷರು ಕಲಿತ ನಿವೇದಿತಾ ಶಾಲೆಯ ಅಧ್ಯಾಪಕ ವೃಂದದವರಿ0ದ ಗೌರವಾರ್ಪಣೆ ನೆರವೇರಿಸಲಾಯಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…