ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಸಮಿತಿಯಿಂದ ಸೋಮೇಶ್ವರ ಪುರಸಭೆಯಲ್ಲಿ ನಾಮನಿರ್ದೇಶನಗೊಂಡ ಸದಸ್ಯರು, ಯುವಕಾಂಗ್ರೆಸ್ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ತೊಕ್ಕೋಟ್ಟು ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಕಚೇರಿಯಲ್ಲಿ ನಡೆಯಿತು.
ಕಾಂಗ್ರೆಸ್ ಮುಖಂಡ ಪ್ರಕಾಶ್ ಕುಂಪಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉಳ್ಳಾಲದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ, ಬಣ ಎನ್ನುವುದಿಲ್ಲ. ಇಲ್ಲಿ ಏನಿದ್ದರೂ ಖಾದರ್ ಬ್ರಿಗೇಡ್ ಮಾತ್ರ ಇರುವುದು. ಪಕ್ಷಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಉಳ್ಳಾಲ ಉರುಸ್ ಸಂದರ್ಭದಲ್ಲೂ ತಮ್ಮಿಂದಾದ ಸೇವೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮುಸ್ತಫಾ ಹರೇಕಳ ಮಾತನಾಡಿದ್ರು. ಉಳ್ಳಾಲ ಬ್ಲಾಕ್ ಸಮಿತಿಯ ಪ್ರಕಾಶ್ ಕುಂಪಲ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ದಿನೇಶ್ ರೈ, ನಗರಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಯುವಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ದಿವ್ಯಾ ಆರ್.ಕೆ. ಸೇರಿಂದ0ತೆ ಹಲವರು ಉಪಸ್ಥಿತರಿದ್ರು.