ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಸಮಿತಿಯಿಂದ ಸೋಮೇಶ್ವರ ಪುರಸಭೆಯಲ್ಲಿ ನಾಮನಿರ್ದೇಶನಗೊಂಡ ಸದಸ್ಯರು, ಯುವಕಾಂಗ್ರೆಸ್ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ತೊಕ್ಕೋಟ್ಟು ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಕಚೇರಿಯಲ್ಲಿ ನಡೆಯಿತು.
ಕಾಂಗ್ರೆಸ್ ಮುಖಂಡ ಪ್ರಕಾಶ್ ಕುಂಪಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉಳ್ಳಾಲದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ, ಬಣ ಎನ್ನುವುದಿಲ್ಲ. ಇಲ್ಲಿ ಏನಿದ್ದರೂ ಖಾದರ್ ಬ್ರಿಗೇಡ್ ಮಾತ್ರ ಇರುವುದು. ಪಕ್ಷಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಉಳ್ಳಾಲ ಉರುಸ್ ಸಂದರ್ಭದಲ್ಲೂ ತಮ್ಮಿಂದಾದ ಸೇವೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮುಸ್ತಫಾ ಹರೇಕಳ ಮಾತನಾಡಿದ್ರು. ಉಳ್ಳಾಲ ಬ್ಲಾಕ್ ಸಮಿತಿಯ ಪ್ರಕಾಶ್ ಕುಂಪಲ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ದಿನೇಶ್ ರೈ, ನಗರಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಯುವಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ದಿವ್ಯಾ ಆರ್.ಕೆ. ಸೇರಿಂದ0ತೆ ಹಲವರು ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…