ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಇಬ್ಬರು ಶಾಸಕರನ್ನು ಉಚ್ಚಾಟನೆ ಮಾಡಿದ ಬಿಜೆಪಿ ಹೈಕಮಾಂಡ್

ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!