ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯವನ್ನು ಭಾರತೀಯ ಸೈನಿಕರಿಗೆ ಅರ್ಪಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯದ ಸಮಾರೋಪ ಸಮಾರಂಭದಲ್ಲಿ ‘ಆಪರೇಷನ್ ಸಿಂಧೂರ್‘ ವಿಜಯೋತ್ಸವ ಆಚರಿಸಲಾಗುತ್ತದೆ. ಏಪ್ರಿಲ್ 22 ರಂದು ಪಾಕಿಸ್ತಾನ ಬೆಂಬಲಿತ ಉಗ್ರರು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಮಂದಿ ಭಾರತೀಯರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಪಾಕ್ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿದ್ದರು. ಭಾರತೀಯ ಸೇನೆಯ ಈ ಕಾರ್ಯವನ್ನು ಗೌರವಿಸುವ ಸಲುವಾಗಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದ ವೇಳೆ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ.
ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಬಿಸಿಸಿಐ ಗೌರವಿಸುತ್ತದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಅವರ ವೀರೋಚಿತ ಪ್ರಯತ್ನಗಳು ರಾಷ್ಟ್ರವನ್ನು ರಕ್ಷಿಸುತ್ತಿವೆ ಮತ್ತು ಪ್ರೇರೇಪಿಸುತ್ತಿವೆ. ಇದರ ಗೌರವಾರ್ಥವಾಗಿ, ಐಪಿಎಲ್ ಫೈನಲ್ ಪಂದ್ಯವನ್ನು ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಮತ್ತು ನಮ್ಮ ವೀರ ಸೈನಿಕರನ್ನು ಗೌರವಿಸಲು ನಾವು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.
ಈ ಸಮಾರೋಪ ಸಮಾರಂಭಕ್ಕೆ ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನು ಹಾಗೂ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರನ್ನು ಆಹ್ವಾನಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬಹಿರಂಗಪಡಿಸಿದ್ದಾರೆ. ಅಲ್ಲದೆ ಐಪಿಎಲ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಮಿಲಿಟರಿ ಬ್ಯಾಂಡ್ನ ಪ್ರದರ್ಶನವೂ ನಡೆಯಲಿದೆ ತಿಳಿದು ಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…