ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಜ್ಯ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಆಯ್ಕೆಗೆ ಚಿಂತನೆ

ರಾಜ್ಯ ಅರಣ್ಯ ಇಲಾಖೆ ರಾಯಭಾರಿಯಾಗಿ ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!