ಜನ ಮನದ ನಾಡಿ ಮಿಡಿತ

Advertisement

ಬೀಡ್​: ಕಾರು ಅಪಘಾತದಿಂದ ತಪ್ಪಿಸಿಕೊಂಡವರ ಮೇಲೆ ಲಾರಿ ಡಿಕ್ಕಿ; ಸ್ಥಳದಲ್ಲೇ 6 ಮಂದಿ ಸಾವು

ಮಹಾರಾಷ್ಟ್ರದ ಬೀಡ್​ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಷಯವೇನೆಂದರೆ ಕಾರು ಮೊದಲ ಬಾರಿಗೆ ಅಪಘಾತಕ್ಕೀಡಾಗಿತ್ತು. ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಮಗುಚಿ ಬಿದ್ದಿತ್ತು. ಆದರೂ ಎಲ್ಲರೂ ಬದುಕುಳಿದಿದ್ದರು. ಕಾರಿನಿಂದ ಹೊರ ಬಂದ ಬಳಿಕ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಘಟನೆಯು ಇಡೀ ಬೀಡ್ ಅನ್ನು ಬೆಚ್ಚಿಬೀಳಿಸಿದೆ ಮತ್ತು ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಬೀಡ್ ಜಿಲ್ಲೆಯ ಮೂಲಕ ಹಾದುಹೋಗುವ ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗರ್ಹಿ ಸೇತುವೆಯಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ಗೆವ್ರೈ ನಗರದ ಬಳಿಯ ಗರ್ಹಿ ಸೇತುವೆಯ ಮೇಲೆ ಎಸ್ಯುವಿ ವಾಹನವೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿತ್ತು.

ಯಾರಿಗೂ ಗಾಯವಾಗಿರಲಿಲ್ಲ, ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಅಲ್ಲಿ ಸಿಲುಕಿಕೊಂಡಿತು ಹೀಗಾಗಿ ಕಾರಿನಲ್ಲಿದ್ದವರು ಹೇಗೋ ಮಾಡಿ ಕಾರಿನಿಂದ ಇಳಿದು ರಸ್ತೆಗೆ ಬಂದಿದ್ದರು. ಆದರೆ ಅದೇ ಹೆದ್ದಾರಿಯಲ್ಲಿ ಹಾದುಹೋಗುತ್ತಿದ್ದ ಟ್ರಕ್ ಅತಿ ವೇಗವಾಗಿ ಬಂದು ಅಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ, ಅವರ ದೇಹಗಳು ಛಿದ್ದ ಛಿದ್ರವಾಗಿದೆ.

ಆ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಟ್ರಕ್ ಅಡಿಯಲ್ಲಿ ಸಿಲುಕಿ ಎಲ್ಲರೂ ಸಾವನ್ನಪ್ಪಿದ್ದಾರೆ. ಮೃತರ ಹೆಸರುಗಳು ಬಾಲು ಅಟ್ಕರೆ, ಮನೋಜ್ ಕರಂಡೆ, ಕೃಷ್ಣ ಜಾಧವ್, ದೀಪಕ್ ಸರೋಯಾ, ಭಾಗವತ್ ಪರಾಲ್ಕರ್ ಮತ್ತು ಸಚಿನ್ ನಾನ್ವಾರೆ. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದು, ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಟ್ರಕ್ ಚಾಲಕನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!