ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ..!

ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುನ್ನ ರಸ್ತೆ ಬದಿಯ ತೋಡುಗಳ ಹೂಳೆತ್ತದ ಪರಿಣಾಮ ಈ ಬಾರಿ ನಗರದ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿ ಸಾಕಷ್ಟು ಸಮಸ್ಯೆ ಆಗಿತ್ತು.

ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದ್ರು. ಇದಕ್ಕೆ ಸಾಕಷ್ಟು ಮಂದಿ ಸದಸ್ಯರು ಧ್ವನಿಗೂಡಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅವರು, ಈ ಸಂಬAಧ ಶಾಸಕರು ಹಾಗೂ ಅಧ್ಯಕ್ಷರು ತಿಂಗಳಿಗೆ ಮೂರು ಬಾರಿಯಂತೆ ಸಭೆ ನಡೆಸಿದರೂ ಹೂಳೆತ್ತುವ ಕಾಮಗಾರಿ ನಡೆಸಿಲ್ಲ. ಅಧಿಕಾರಿಗಳು ಅಧ್ಯಕ್ಷರ ಮಾತು ಕೇಳುತ್ತಿಲ್ಲವೇ?. ಇದಕ್ಕೆ ಅಧ್ಯಕ್ಷರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದುರ್ಗಾ ಪ್ರಸಾದ್ ಅವರು, ಎರಡು ವರ್ಷಕ್ಕೊಮ್ಮೆ ನಗರದ ದೊಡ್ಡ ತೋಡುಗಳ ಹೂಳೆತ್ತುವುದು ವಾಡಿಕೆ. ರಸ್ತೆ ಬದಿಯ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದರೆ, 15 ದಿನ ಮುಂಚಿತವಾಗಿ ಮಳೆ ಬಂದ ಕಾರಣ ಹೂಳೆತ್ತುವ ಕಾಮಗಾರಿಗೆ ತೊಡಕಾಗಿದೆ. ಶಾಸಕರು ಸೂಚಿಸಿದ ಹಿನ್ನೆಲೆಯಲ್ಲಿ ಕಲ್ಸಂಕ ತೋಡಿನ ಹೂಳೆತ್ತುವ ಕಾಮಗಾರಿಗೆ ಏಪ್ರಿಲ್‌ನಲ್ಲಿ ಟೆಂಡರ್ ಕರೆದು, ಕಾಮಗಾರಿ ಆರಂಭಿಸಲಾಗಿತ್ತು. ಈಗಾಗಲೇ ಶೇ.80ರಷ್ಟು ಕಾಮಗಾರಿಯನ್ನು ಮುಗಿಸಲಾಗಿದೆ. ಇನ್ನೂ ಶೇ. 20ರಷ್ಟು ಕಾಮಗಾರಿ ಬಾಕಿ ಇದೆ. ಆದರೆ ಮಳೆಯಿಂದಾಗಿ ಅದಕ್ಕೆ ಸಮಸ್ಯೆ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!