ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುನ್ನ ರಸ್ತೆ ಬದಿಯ ತೋಡುಗಳ ಹೂಳೆತ್ತದ ಪರಿಣಾಮ ಈ ಬಾರಿ ನಗರದ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿ ಸಾಕಷ್ಟು ಸಮಸ್ಯೆ ಆಗಿತ್ತು.
ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದ್ರು. ಇದಕ್ಕೆ ಸಾಕಷ್ಟು ಮಂದಿ ಸದಸ್ಯರು ಧ್ವನಿಗೂಡಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅವರು, ಈ ಸಂಬAಧ ಶಾಸಕರು ಹಾಗೂ ಅಧ್ಯಕ್ಷರು ತಿಂಗಳಿಗೆ ಮೂರು ಬಾರಿಯಂತೆ ಸಭೆ ನಡೆಸಿದರೂ ಹೂಳೆತ್ತುವ ಕಾಮಗಾರಿ ನಡೆಸಿಲ್ಲ. ಅಧಿಕಾರಿಗಳು ಅಧ್ಯಕ್ಷರ ಮಾತು ಕೇಳುತ್ತಿಲ್ಲವೇ?. ಇದಕ್ಕೆ ಅಧ್ಯಕ್ಷರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದುರ್ಗಾ ಪ್ರಸಾದ್ ಅವರು, ಎರಡು ವರ್ಷಕ್ಕೊಮ್ಮೆ ನಗರದ ದೊಡ್ಡ ತೋಡುಗಳ ಹೂಳೆತ್ತುವುದು ವಾಡಿಕೆ. ರಸ್ತೆ ಬದಿಯ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದರೆ, 15 ದಿನ ಮುಂಚಿತವಾಗಿ ಮಳೆ ಬಂದ ಕಾರಣ ಹೂಳೆತ್ತುವ ಕಾಮಗಾರಿಗೆ ತೊಡಕಾಗಿದೆ. ಶಾಸಕರು ಸೂಚಿಸಿದ ಹಿನ್ನೆಲೆಯಲ್ಲಿ ಕಲ್ಸಂಕ ತೋಡಿನ ಹೂಳೆತ್ತುವ ಕಾಮಗಾರಿಗೆ ಏಪ್ರಿಲ್ನಲ್ಲಿ ಟೆಂಡರ್ ಕರೆದು, ಕಾಮಗಾರಿ ಆರಂಭಿಸಲಾಗಿತ್ತು. ಈಗಾಗಲೇ ಶೇ.80ರಷ್ಟು ಕಾಮಗಾರಿಯನ್ನು ಮುಗಿಸಲಾಗಿದೆ. ಇನ್ನೂ ಶೇ. 20ರಷ್ಟು ಕಾಮಗಾರಿ ಬಾಕಿ ಇದೆ. ಆದರೆ ಮಳೆಯಿಂದಾಗಿ ಅದಕ್ಕೆ ಸಮಸ್ಯೆ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…