ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನೀರಿನ ತೋಡಿನಲ್ಲಿ ಹೂಳು..! ಜನಜೀವನ ಅಲ್ಲೋಲ..ಕಲ್ಲೋಲ

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕು ಜೋಡು ರಸ್ತೆ, ಪಿಲಿಚಂಡಿ ಸ್ಥಾನದಲ್ಲಿ ಹರಿಯುವ ನೀರಿನ ತೋಡಿನಲ್ಲಿ ಹೂಳು ತುಂಬಿ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ.


ಇಲ್ಲಿನ ಪ್ರದೇಶದಲ್ಲಿ ಮಳೆಗಾಲದ ಪೂರ್ವಭಾವಿಯಾಗಿ ಹಲವು ವರ್ಷಗಳಿಂದ ತೋಡಿನ ಹೂಳು ತೆರವುಗೊಳಿಸಲು ಹಲವು ಬಾರಿ ಸೂಚಿಸಲಾಗಿತ್ತು. ಅಲ್ಲದೆ, ಈ ವಿಚಾರವನ್ನು ಮೂರು ವರ್ಷಗಳಿಂದ ಗ್ರಾಮ ಪಂಚಾಯತ್ ಗಮನಕ್ಕೆ ತರಲಾಗಿತ್ತು. ಅದನ್ನು ನಿರ್ಲಕ್ಷಿಸಿದ ಪರಿಣಾಮ ಇಂದು ಇಂತಹ ಪರಿಸ್ಥಿತಿಯನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಭಾಗದಲ್ಲಿ ಹಲವು ವರ್ಷಗಳಿಂದ ತೋಡಿನ ಹೂಳು ಎತ್ತಿಲ್ಲ. ಎರಡು ವರ್ಷಗಳಲ್ಲಿ ನೆರೆ ಬಂದು ಮನೆಯೊಳಗೆ ನೀರು ಪ್ರವೇಶಿಸಿ ಜನರ ಜೀವನ ಪರದಾಡುವಂತಾಗಿತ್ತು, ಅದೇ ರೀತಿ ಈ ಬಾರಿಯೂ ಇಲ್ಲಿನ ಮನೆಗಳಲ್ಲಿ ನೀರು ಹೋಗಿ ಜನರ ಜೀವನ ಅಸ್ತವ್ಯಸ್ತವಾಗಿದೆ.

ಮನೆಯ ಒಳಗೆ ನೀರು ತುಂಬಿ ಜೊತೆಗೆ ಅಪಾರ ವಸ್ತುಗಳು ಹಾನಿಯಾಗಿದೆ. ಸುಮಾರು ಮನೆಯ ಒಳಗೆ ನೀರು ತುಂಬಿದ್ದು, ಮನೆಯ ಮಂದಿಗೆ ಮನೆಯಿಂದ ಹೊರಬರಲೂ ಸಾಧ್ಯವಿಲ್ಲದಂತಾಗಿದೆ. ಈ ಮನೆಯಲ್ಲಿ ಸುಮಾರು ಹದಿನೈದು ಸಣ್ಣ ಸಣ್ಣ ಮಕ್ಕಳೇ ಇದ್ದು, ಮನೆಯು ನೀರಿನಿಂದ ತುಂಬಿ ರಸ್ತೆಯಲ್ಲಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಜೀವನ ಜೊತೆಯೂ ಸರಕಾರದ ಆಟ ಎಂಬ0ತೆ ಮನೆ ಹಾಗೂ ಮಕ್ಕಳ ಪಾಡನ್ನು ಕೇಳುವವರಿಲ್ಲ…ಮನೆಯ ಹತ್ತಿರದಲ್ಲಿಯೂ ಯಾವುದೇ ರೀತಿಯ ನೀರು ಹೋಗುವ ವ್ಯವಸ್ಥೆಯಿಲ್ಲದೆ, ರಸ್ತೆ ಬದಿಯಲ್ಲಿ ಮಾತ್ರ ನೀರು ಹೋಗುವ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.ಮೂರು ವರ್ಷದಿಂದ ಗ್ರಾಮ ಪಂಚಾಯತಿಗೆ ಮನವಿ ಮಾಡಿದ್ದರೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಈ ಸಾಮಾನ್ಯ ಜನರ ಜೀವನದ ಜೊತೆಗೆ ಚೆಲ್ಲಾಟ ಆಡುವ ಬದಲು ಆದಷ್ಟು ಬೇಗ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕಾಗಿ ಈ ಮೂಲಕ ಗ್ರಾಮಸ್ಥರು ವಿನಂತಿಸಿಕೊ0ಡಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!