ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕು ಜೋಡು ರಸ್ತೆ, ಪಿಲಿಚಂಡಿ ಸ್ಥಾನದಲ್ಲಿ ಹರಿಯುವ ನೀರಿನ ತೋಡಿನಲ್ಲಿ ಹೂಳು ತುಂಬಿ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ.
ಇಲ್ಲಿನ ಪ್ರದೇಶದಲ್ಲಿ ಮಳೆಗಾಲದ ಪೂರ್ವಭಾವಿಯಾಗಿ ಹಲವು ವರ್ಷಗಳಿಂದ ತೋಡಿನ ಹೂಳು ತೆರವುಗೊಳಿಸಲು ಹಲವು ಬಾರಿ ಸೂಚಿಸಲಾಗಿತ್ತು. ಅಲ್ಲದೆ, ಈ ವಿಚಾರವನ್ನು ಮೂರು ವರ್ಷಗಳಿಂದ ಗ್ರಾಮ ಪಂಚಾಯತ್ ಗಮನಕ್ಕೆ ತರಲಾಗಿತ್ತು. ಅದನ್ನು ನಿರ್ಲಕ್ಷಿಸಿದ ಪರಿಣಾಮ ಇಂದು ಇಂತಹ ಪರಿಸ್ಥಿತಿಯನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಭಾಗದಲ್ಲಿ ಹಲವು ವರ್ಷಗಳಿಂದ ತೋಡಿನ ಹೂಳು ಎತ್ತಿಲ್ಲ. ಎರಡು ವರ್ಷಗಳಲ್ಲಿ ನೆರೆ ಬಂದು ಮನೆಯೊಳಗೆ ನೀರು ಪ್ರವೇಶಿಸಿ ಜನರ ಜೀವನ ಪರದಾಡುವಂತಾಗಿತ್ತು, ಅದೇ ರೀತಿ ಈ ಬಾರಿಯೂ ಇಲ್ಲಿನ ಮನೆಗಳಲ್ಲಿ ನೀರು ಹೋಗಿ ಜನರ ಜೀವನ ಅಸ್ತವ್ಯಸ್ತವಾಗಿದೆ.
ಮನೆಯ ಒಳಗೆ ನೀರು ತುಂಬಿ ಜೊತೆಗೆ ಅಪಾರ ವಸ್ತುಗಳು ಹಾನಿಯಾಗಿದೆ. ಸುಮಾರು ಮನೆಯ ಒಳಗೆ ನೀರು ತುಂಬಿದ್ದು, ಮನೆಯ ಮಂದಿಗೆ ಮನೆಯಿಂದ ಹೊರಬರಲೂ ಸಾಧ್ಯವಿಲ್ಲದಂತಾಗಿದೆ. ಈ ಮನೆಯಲ್ಲಿ ಸುಮಾರು ಹದಿನೈದು ಸಣ್ಣ ಸಣ್ಣ ಮಕ್ಕಳೇ ಇದ್ದು, ಮನೆಯು ನೀರಿನಿಂದ ತುಂಬಿ ರಸ್ತೆಯಲ್ಲಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಜೀವನ ಜೊತೆಯೂ ಸರಕಾರದ ಆಟ ಎಂಬ0ತೆ ಮನೆ ಹಾಗೂ ಮಕ್ಕಳ ಪಾಡನ್ನು ಕೇಳುವವರಿಲ್ಲ…ಮನೆಯ ಹತ್ತಿರದಲ್ಲಿಯೂ ಯಾವುದೇ ರೀತಿಯ ನೀರು ಹೋಗುವ ವ್ಯವಸ್ಥೆಯಿಲ್ಲದೆ, ರಸ್ತೆ ಬದಿಯಲ್ಲಿ ಮಾತ್ರ ನೀರು ಹೋಗುವ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.ಮೂರು ವರ್ಷದಿಂದ ಗ್ರಾಮ ಪಂಚಾಯತಿಗೆ ಮನವಿ ಮಾಡಿದ್ದರೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಈ ಸಾಮಾನ್ಯ ಜನರ ಜೀವನದ ಜೊತೆಗೆ ಚೆಲ್ಲಾಟ ಆಡುವ ಬದಲು ಆದಷ್ಟು ಬೇಗ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕಾಗಿ ಈ ಮೂಲಕ ಗ್ರಾಮಸ್ಥರು ವಿನಂತಿಸಿಕೊ0ಡಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…