ಜನ ಮನದ ನಾಡಿ ಮಿಡಿತ

Advertisement

ಭುವನೇಶ್ವರ: ಪತ್ರಕರ್ತನ ಮೇಲೆ ಹಲ್ಲೆ; ಪ್ರಕರಣ ದಾಖಲು

ಒಡಿಶಾದ ಬೋಲಂಗೀರ್‌ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪತ್ರಕರ್ತ ಬಿಜಯ್ ಪ್ರಧಾನ್‌ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.

ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!