ಒಡಿಶಾದ ಬೋಲಂಗೀರ್ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತ ಬಿಜಯ್ ಪ್ರಧಾನ್ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.
ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…