ಒಡಿಶಾದ ಬೋಲಂಗೀರ್ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತ ಬಿಜಯ್ ಪ್ರಧಾನ್ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.
ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…