ಒಡಿಶಾದ ಬೋಲಂಗೀರ್ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತ ಬಿಜಯ್ ಪ್ರಧಾನ್ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.
ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…