ಜನ ಮನದ ನಾಡಿ ಮಿಡಿತ

ನವದೆಹಲಿ: ಸಾವರ್ಕರ್ ಅವರ ಅದಮ್ಯ ಧೈರ್ಯ, ಹೋರಾಟದ ಸಾಹಸಗಾಥೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ- ಪ್ರಧಾನಿ ಮೋದಿ

ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾವರ್ಕರ್ ಅವರ ಅದಮ್ಯ ಧೈರ್ಯ ಮತ್ತು ಹೋರಾಟದ ಸಾಹಸಗಾಥೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಅವರನ್ನು ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಬಣ್ಣಿಸಿರುವ ಮೋದಿ. ಬ್ರಿಟಿಷ್‌ರಿಂದ ಅತ್ಯಂತ ಕಠಿಣ ಚಿತ್ರಹಿಂಸೆಗೆ ಒಳಗಾದರೂ ಮಾತೃಭೂಮಿಯ ಮೇಲೆ ಸಾವರ್ಕರ್ ಅವರಿಗಿರುವ ಸಮರ್ಪಣೆಯನ್ನು ಕುಗ್ಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಅವರ ತ್ಯಾಗ ಮತ್ತು ಬದ್ಧತೆಯು ಭಾರತದ ಅಭಿವೃದ್ಧಿಯ ನಿರ್ಮಾಣಕ್ಕೆ ದಾರಿ ದೀಪವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಇನ್ನು, ಸಾವರ್ಕರ್ ಜನ್ಮದಿನದ ಶುಭಾಶಯ ತಿಳಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಸಮಾಜವನ್ನು ಅಸ್ಪೃಶ್ಯತೆಯ ಪಿಡುಗಿನಿಂದ ಮುಕ್ತಗೊಳಿಸಿ ಅದನ್ನು ಏಕತೆ ಎಂಬ ಬಲವಾದ ದಾರದಲ್ಲಿ ಬಂಧಿಸಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ವೀರ ಸಾವರ್ಕರ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ” ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

error: Content is protected !!