ಮಂಗಳವಾರ ಮಧ್ಯಾಹ್ನ ಬಂಟ್ವಾಳದ ಇರಾಕೋಡಿಯಲ್ಲಿ ಹತ್ಯೆಗೀಡಾದ ಕೊಳತ್ತಮಜಲಿನ ಬೆಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಮಾನ್ ಅವರ ಮೃತದೇಹ ಇರಿಸಿದ್ದ ಯೆನಪೊಯಾ ಆಸ್ಪತ್ರೆ ಎದುರು ಜಮಾಯಿಸಿದ್ದ ಗುಂಪು ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿತು.
ಒಂದು ಹಂತದಲ್ಲಿ ಪೊಲೀಸರ ಜೊತೆ ತೀವ್ರ ವಾಗ್ವಾದಕ್ಕೆ ಇಳಿದ ಯುವಕರ ಗುಂಪು ಬುಧವಾರ ದಕ್ಷಿಣ ಕನ್ನಡ ಬಂದ್ಗೆ ಕರೆಕೊಡುವುದಾಗಿ ಹೇಳಿತು. ಈ ಹಂತದಲ್ಲಿ ಅಲ್ಲಿದ್ದ ಹಿರಿಯರು ಅವರನ್ನು ಸಮಾಧಾನ ಮಾಡಿದ್ರು. ಗಾಯಾಳು ಖಲಂದರ್ ಶಾಫಿಯನ್ನು ದಾಖಲಿಸಿದ್ದ ಹೈಲ್ಯಾಂಡ್ ಆಸ್ಪತ್ರೆ ಎದುರು ಕೂಡಾ ಯುವಕರ ಗುಂಪು ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡಿದು ತಿನ್ನುವವರ ಜೀವಕ್ಕೆ ಬೆಲೆ ಇಲ್ಲವೇ, ಯಾವ ಪ್ರಕರಣಗಳಲ್ಲೂ ಇಲ್ಲದ ಮುಗ್ಧರು ಜೀವ ಕಳೆದುಕೊಳ್ಳುತ್ತಿದ್ದಾರೆ, ಇದಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿತು. ಬಜ್ಪೆ ಚಲೋ ಸಂದರ್ಭದಲ್ಲಿ ಮಾಡಿದ ಉದ್ರಿಕ್ತ ಭಾಷಣಗಳು ಇದಕ್ಕೆ ಕಾರಣ, ಸಮುದಾಯಗಳ ನಡುವೆ ದ್ವೇಷ ಹರಡುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಗುಂಪು ಆಕ್ರೋಶ ವ್ಯಕ್ತಪಡಿಸಿತು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…