ಮಂಗಳವಾರ ಮಧ್ಯಾಹ್ನ ಬಂಟ್ವಾಳದ ಇರಾಕೋಡಿಯಲ್ಲಿ ಹತ್ಯೆಗೀಡಾದ ಕೊಳತ್ತಮಜಲಿನ ಬೆಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಮಾನ್ ಅವರ ಮೃತದೇಹ ಇರಿಸಿದ್ದ ಯೆನಪೊಯಾ ಆಸ್ಪತ್ರೆ ಎದುರು ಜಮಾಯಿಸಿದ್ದ ಗುಂಪು ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿತು.
ಒಂದು ಹಂತದಲ್ಲಿ ಪೊಲೀಸರ ಜೊತೆ ತೀವ್ರ ವಾಗ್ವಾದಕ್ಕೆ ಇಳಿದ ಯುವಕರ ಗುಂಪು ಬುಧವಾರ ದಕ್ಷಿಣ ಕನ್ನಡ ಬಂದ್ಗೆ ಕರೆಕೊಡುವುದಾಗಿ ಹೇಳಿತು. ಈ ಹಂತದಲ್ಲಿ ಅಲ್ಲಿದ್ದ ಹಿರಿಯರು ಅವರನ್ನು ಸಮಾಧಾನ ಮಾಡಿದ್ರು. ಗಾಯಾಳು ಖಲಂದರ್ ಶಾಫಿಯನ್ನು ದಾಖಲಿಸಿದ್ದ ಹೈಲ್ಯಾಂಡ್ ಆಸ್ಪತ್ರೆ ಎದುರು ಕೂಡಾ ಯುವಕರ ಗುಂಪು ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡಿದು ತಿನ್ನುವವರ ಜೀವಕ್ಕೆ ಬೆಲೆ ಇಲ್ಲವೇ, ಯಾವ ಪ್ರಕರಣಗಳಲ್ಲೂ ಇಲ್ಲದ ಮುಗ್ಧರು ಜೀವ ಕಳೆದುಕೊಳ್ಳುತ್ತಿದ್ದಾರೆ, ಇದಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿತು. ಬಜ್ಪೆ ಚಲೋ ಸಂದರ್ಭದಲ್ಲಿ ಮಾಡಿದ ಉದ್ರಿಕ್ತ ಭಾಷಣಗಳು ಇದಕ್ಕೆ ಕಾರಣ, ಸಮುದಾಯಗಳ ನಡುವೆ ದ್ವೇಷ ಹರಡುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಗುಂಪು ಆಕ್ರೋಶ ವ್ಯಕ್ತಪಡಿಸಿತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…