ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: 5 ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶಿಸಿದ ತಹಶಿಲ್ದಾರ್

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳದಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಹತ್ಯೆ ಮಾಡಿದ ಹಿನ್ನಲೆ ಮೇ.27ರ ಸಂಜೆಯಿ0ದ ಮೇ.30ರ ಸಂಜೆ 6 ಗಂಟೆವರೆಗೆ ಬಂಟ್ವಾಳ ,ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಿ ಅದೇಶ ಹೊರಡಿಸಲಾಗಿದೆ ಎಂದು ತಹಶಿಲ್ದಾರ್ ತಿಳಿಸಿದ್ದಾರೆ.

ರಹೀಮ್ ಎಂಬಾತನ ಕೊಲೆಯ ಬಳಿಕ ದ.ಕ.ಜಿಲ್ಲಾ ಪೋಲೀಸ್ ಘಟಕ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಾ0ತಾಗಿದ್ದು, ಪ್ರಕ್ಷ್ಯಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ದ.ಕ.ಜಿಲ್ಲಾ ಪೋಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಅದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತೀ ಅವಶ್ಯವಾಗಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಿರುವುದರಿಂದ ದ.ಕ.ಜಿಲ್ಲಾ ಪೋಲೀಸ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಅದೇಶ ಹೊರಡಿಸಿದೆ.

ನಿಷೇಧಾಜ್ಞೆ ಅದೇಶದಿಂದ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿಷೇಧ, ಮೆರವಣಿಗೆ ಸಭೆ ಸಮಾರಂಭಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಯಾವುದೇ ಶಸ್ತç, ದೊಣ್ಣೆ, ಕತ್ತಿ,ಗದೆ, ಬಂದೂಕು, ಚಾಕು ಕೋಲು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧ ಮಾಡಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!