ಜನ ಮನದ ನಾಡಿ ಮಿಡಿತ

Advertisement

ಚಂಡೀಗಢ : ಮುಂದಿನ ಪಂದ್ಯ RCB v/s ಪಂಜಾಬ್ ಕಿಂಗ್ಸ್ Q1 ; ಒಂದು ವೇಳೆ ಮಳೆ ಬಂದರೆ ಮುಂದೇನು..?

ಇದುವರೆಗೂ ಐಪಿಎಲ್‌ ಟ್ರೋಫಿ ಗೆಲ್ಲದ ತಂಡಗಳಾದ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬುಧವಾರ ನಡೆಯುವ ಐಪಿಎಲ್ 2025 ರ ಕ್ವಾಲಿಫೈಯರ್ 1 ರಲ್ಲಿ ಕಣಕ್ಕಿಳಿಯಲಿದೆ. ಈ ತಂಡಗಳ ಪಂದ್ಯಕ್ಕೆ ಮುಲ್ಲನ್ಪುರ್‌ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಅಣಿಯಾಗಿದೆ. ಗೆಲುವು ಸಾಧಿಸಿದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಸೋತ ತಂಡಕ್ಕೆ ಎರಡನೇ ಕ್ವಾಲಿಫೈಯರ್‌ನಲ್ಲಿ ಆಡುವ ಅವಕಾಶ ಸಿಗಲಿದೆ. ಆದರೆ ಪಂದ್ಯ ಮಳೆಯಿಂದ ರದ್ದಾದರೆ ಫಲಿತಾಂಶ ನಿರ್ಣಾಯ ಹೇಗೆ ಎಂಬ ಪ್ರಶ್ನೆ ಉಭಯ ತಂಡಗಳ ಅಭಿಮಾನಿಗಳಲ್ಲಿ ಎದ್ದಿದೆ.

ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಪಂಜಾಬ್‌ ಲೀಗ್‌ನಲ್ಲಿ 9 ಪಂದ್ಯ ಗೆದ್ದು 19 ಅಂಕದೊಂದಿಗೆ ಅಗ್ರಸ್ಥಾನ ಪಡೆಯಿತು. ಆರ್‌ಸಿಬಿ ಕೂಡ 9 ಪಂದ್ಯ ಗೆದ್ದು 19 ಅಂಕ ಗಳಿಸಿದೆ. ಆದರೆ ರನ್‌ ರೇಟ್‌ನಲ್ಲಿ ಹಿಂದಿದ್ದ ಕಾರಣ ದ್ವಿತೀಯ ಸ್ಥಾನಿಯಾಗಿದೆ.

ಕ್ವಾಲಿಫೈಯರ್‌ ಪಂದ್ಯಕ್ಕೆ ಮೀಸಲು ದಿನ ಇರದ ಕಾರಣ ಬುಧವಾರ ನಡೆಯುವ ಆರ್‌ಸಿಬಿ ಮತ್ತು ಪಂಜಾಬ್‌ ನಡುವಿನ ಪಂದ್ಯ ಮಳೆಯಿಂದ ರದ್ದಾದರೆ ಪಂಜಾಬ್‌ ಕಿಂಗ್ಸ್‌ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಕನಿಷ್ಠ 5 ಓವರ್‌ಗಳ ಪಂದ್ಯ ಅಥವಾ ಸೂಪರ್‌ ಓವರ್‌ ಕೂಡ ನಡೆಯಲಿದ್ದರೆ ಆಗ ಅಂಕಪಟ್ಟಿಯಲ್ಲಿ ಮೇಲಿನ ಸ್ಥಾನ ಪಡೆದ ತಂಡ ಮುನ್ನಡೆಯಲಿದೆ. ಆರ್‌ಸಿಬಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದ ಕಾರಣ. ಪಂದ್ಯ ರದ್ದಾದರೆ ಮುಂಬೈ ಮತ್ತು ಗುಜರಾತ್‌ ನಡುವಿನ ಎಲಿಮಿನೇಟರ್‌ ಪಂದ್ಯದ ವಿಜೇತರನ್ನು ದ್ವಿತೀಯ ಕ್ವಾಲಿಫೈಯರ್‌ನಲ್ಲಿ ಎದುರಿಸಲಿದೆ.

ಆರ್‌ಸಿಬಿ ಹಾಲಿ ಆವೃತ್ತಿಯಲ್ಲಿ ತವರಿನಾಚೆ ಆಡಿದ ಎಲ್ಲ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ ಆವೃತ್ತಿಯೊಂದರಲ್ಲಿ ಎದುರಾಳಿ ನೆಲದಲ್ಲಿ ಆಡಿದ ಲೀಗ್‌ನ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಹೀಗಾಗಿ ಕ್ವಾಲಿಫೈಯರ್‌ ಪಂದ್ಯ ಕೂಡ ಗೆಲ್ಲಬಹುದು ಎಂಬ ನಂಬಿಕೆ ಅಭಿಮಾನಿಗಳದ್ದಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!