ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ :ಸುರೇಶ್ ಕೊಲಕಾಡಿಯ 35ನೇ ವರ್ಷದ ಯಕ್ಷ ಪಯಣ; ಮೇ.31ರಂದು ಕಾರ್ಯಕ್ರಮ

ಯಕ್ಷಮಿತ್ರರು ಪಂಜಿನಡ್ಕ ಹಾಗು ಸುರೇಶ್ ಕೊಲಕಾಡಿ ಶಿಷ್ಯ ವೃಂದ ಹಾಗೂ ಅಭಿಮಾನಿ ಬಳಗ ಇವರ ಜಂಟಿ ಆಶ್ರಯದಲ್ಲಿ ಸುರೇಶ್ ಕೊಲಕಾಡಿ ಇವರ 35ನೇ ವರ್ಷದ ಯಕ್ಷ ಪಯಣದ ಪ್ರಯುಕ್ತ ಸುರೇಶ್ ಕೊಲಕಾಡಿಯವರಿಗೆ ಸಾರ್ವಜನಿಕರ ಸಂಮಾನ ಬಿರುದು ಪ್ರದಾನ ಮತ್ತು ಯಕ್ಷಗಾನ ಮೇ.31ರಂದು ನಡೆಯಲಿದೆ.

ಸಂಜೆ 6ರಿಂದ ಶ್ರೀ ಕೋಡ್ದಬ್ಬು ಧೂಮಾವತಿ ದೈವಸ್ಥಾನದ ವಠಾರ ಕಕ್ವ ಮುಲ್ಕಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಸಂಜೆ 6ರಿಂದ ದೇವಿ ಮಹಾತ್ಮೇ ಯಕ್ಷಗಾನ ಬಯಲಾಟ ನಡೆಯಲಿದ್ದು, ರಾತ್ರಿ 8;30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಯಕ್ಷಗಾನದ ಹಿರಿಯ ಕಲಾವಿದರಾದ ಅಂಬರೀಶ್ ಶೆಟ್ಟಿಯವರಿಗೆ ಗುರುವಂದನೆ ಬಳಿಕ ಯಕ್ಷಗಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ಗೌರವಧನ ನೀಡಲಾಗುವುದು. ಇನ್ನು ಪಂಜಿನಡ್ಕ ಶಾಲೆಯಲ್ಲಿ 10ನೇ ತರಗತಿಯಲ್ಲಿ 90% ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿಧನಸಹಾಯ ನೀಡಲಿದ್ದಾರೆ. ಉತ್ತಮ ಸೇವೆಗಾಗಿ 2023ನೇ ಸಾಲಿನ ರಾಜ್ಯದ ಸಿಎಂ ಅವರಿಂದ ಪದಕ ಸ್ವೀಕರಿಸಿದ ಶ್ರೀಮತಿ ಕಾತ್ಯಾಯಿನಿ ಆಳ್ವ ಇವರಿಗೆ ಸಂಮಾನ ನಡೆಯಲಿದೆ. ಇವರ ಜೊತೆಗೆ ಈ ಸಂಮಾನವನ್ನು ಉತ್ತಮ ಸಮಾಜಸೇವೆಗೈದಂತಹ ಶ್ರೀಮತಿ ರೇಖಾ ದೇವಾಡಿಗ ಪಡೆದುಕೊಳ್ಳಲಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಖ್ಯಾತ ಶನಿಪೂಜೆ ಅರ್ಥಧಾರಿ ಕಿರಣ್ ಕುಮಾರ್ ಪಡುಪಣಂಬೂರ್ ಅವರ ಬಗ್ಗೆಗಿನ ಕೃತಿ ಬಿಡುಗಡೆಗೊಳ್ಳಲಿದೆ. ಮುಖ್ಯವಾಗಿ ವಿಶೇಷ ಸನ್ಮಾನಿತರಾಗಿ ತುಳು ಹಾಗೂ ಕನ್ನಡ ಚಿತ್ರರಂಗದ ಪ್ರಸಿದ್ಧ ಕಲಾವಿದರಾದ `ಕಾಂತಾರ’ ಚಲನಚಿತ್ರ ಖ್ಯಾತಿಯ ಪ್ರಕಾಶ್ ಕೆ ತುಮಿನಾಡು ಹಾಗೂ ದೀಪಕ್ ರೈ ಪಾಣಾಜೆ ಆಗಮಿಸಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮಗಳು ಅಭಿಮತ ಟಿವಿ ಯೂಟ್ಯುಬ್ ಚಾನಲ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!