ಯಕ್ಷಮಿತ್ರರು ಪಂಜಿನಡ್ಕ ಹಾಗು ಸುರೇಶ್ ಕೊಲಕಾಡಿ ಶಿಷ್ಯ ವೃಂದ ಹಾಗೂ ಅಭಿಮಾನಿ ಬಳಗ ಇವರ ಜಂಟಿ ಆಶ್ರಯದಲ್ಲಿ ಸುರೇಶ್ ಕೊಲಕಾಡಿ ಇವರ 35ನೇ ವರ್ಷದ ಯಕ್ಷ ಪಯಣದ ಪ್ರಯುಕ್ತ ಸುರೇಶ್ ಕೊಲಕಾಡಿಯವರಿಗೆ ಸಾರ್ವಜನಿಕರ ಸಂಮಾನ ಬಿರುದು ಪ್ರದಾನ ಮತ್ತು ಯಕ್ಷಗಾನ ಮೇ.31ರಂದು ನಡೆಯಲಿದೆ.
ಸಂಜೆ 6ರಿಂದ ಶ್ರೀ ಕೋಡ್ದಬ್ಬು ಧೂಮಾವತಿ ದೈವಸ್ಥಾನದ ವಠಾರ ಕಕ್ವ ಮುಲ್ಕಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಸಂಜೆ 6ರಿಂದ ದೇವಿ ಮಹಾತ್ಮೇ ಯಕ್ಷಗಾನ ಬಯಲಾಟ ನಡೆಯಲಿದ್ದು, ರಾತ್ರಿ 8;30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಯಕ್ಷಗಾನದ ಹಿರಿಯ ಕಲಾವಿದರಾದ ಅಂಬರೀಶ್ ಶೆಟ್ಟಿಯವರಿಗೆ ಗುರುವಂದನೆ ಬಳಿಕ ಯಕ್ಷಗಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ಗೌರವಧನ ನೀಡಲಾಗುವುದು. ಇನ್ನು ಪಂಜಿನಡ್ಕ ಶಾಲೆಯಲ್ಲಿ 10ನೇ ತರಗತಿಯಲ್ಲಿ 90% ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿಧನಸಹಾಯ ನೀಡಲಿದ್ದಾರೆ. ಉತ್ತಮ ಸೇವೆಗಾಗಿ 2023ನೇ ಸಾಲಿನ ರಾಜ್ಯದ ಸಿಎಂ ಅವರಿಂದ ಪದಕ ಸ್ವೀಕರಿಸಿದ ಶ್ರೀಮತಿ ಕಾತ್ಯಾಯಿನಿ ಆಳ್ವ ಇವರಿಗೆ ಸಂಮಾನ ನಡೆಯಲಿದೆ. ಇವರ ಜೊತೆಗೆ ಈ ಸಂಮಾನವನ್ನು ಉತ್ತಮ ಸಮಾಜಸೇವೆಗೈದಂತಹ ಶ್ರೀಮತಿ ರೇಖಾ ದೇವಾಡಿಗ ಪಡೆದುಕೊಳ್ಳಲಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಖ್ಯಾತ ಶನಿಪೂಜೆ ಅರ್ಥಧಾರಿ ಕಿರಣ್ ಕುಮಾರ್ ಪಡುಪಣಂಬೂರ್ ಅವರ ಬಗ್ಗೆಗಿನ ಕೃತಿ ಬಿಡುಗಡೆಗೊಳ್ಳಲಿದೆ. ಮುಖ್ಯವಾಗಿ ವಿಶೇಷ ಸನ್ಮಾನಿತರಾಗಿ ತುಳು ಹಾಗೂ ಕನ್ನಡ ಚಿತ್ರರಂಗದ ಪ್ರಸಿದ್ಧ ಕಲಾವಿದರಾದ `ಕಾಂತಾರ’ ಚಲನಚಿತ್ರ ಖ್ಯಾತಿಯ ಪ್ರಕಾಶ್ ಕೆ ತುಮಿನಾಡು ಹಾಗೂ ದೀಪಕ್ ರೈ ಪಾಣಾಜೆ ಆಗಮಿಸಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮಗಳು ಅಭಿಮತ ಟಿವಿ ಯೂಟ್ಯುಬ್ ಚಾನಲ್ನಲ್ಲಿ ನೇರಪ್ರಸಾರಗೊಳ್ಳಲಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…