ಯಕ್ಷಮಿತ್ರರು ಪಂಜಿನಡ್ಕ ಹಾಗು ಸುರೇಶ್ ಕೊಲಕಾಡಿ ಶಿಷ್ಯ ವೃಂದ ಹಾಗೂ ಅಭಿಮಾನಿ ಬಳಗ ಇವರ ಜಂಟಿ ಆಶ್ರಯದಲ್ಲಿ ಸುರೇಶ್ ಕೊಲಕಾಡಿ ಇವರ 35ನೇ ವರ್ಷದ ಯಕ್ಷ ಪಯಣದ ಪ್ರಯುಕ್ತ ಸುರೇಶ್ ಕೊಲಕಾಡಿಯವರಿಗೆ ಸಾರ್ವಜನಿಕರ ಸಂಮಾನ ಬಿರುದು ಪ್ರದಾನ ಮತ್ತು ಯಕ್ಷಗಾನ ಮೇ.31ರಂದು ನಡೆಯಲಿದೆ.
ಸಂಜೆ 6ರಿಂದ ಶ್ರೀ ಕೋಡ್ದಬ್ಬು ಧೂಮಾವತಿ ದೈವಸ್ಥಾನದ ವಠಾರ ಕಕ್ವ ಮುಲ್ಕಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಸಂಜೆ 6ರಿಂದ ದೇವಿ ಮಹಾತ್ಮೇ ಯಕ್ಷಗಾನ ಬಯಲಾಟ ನಡೆಯಲಿದ್ದು, ರಾತ್ರಿ 8;30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಯಕ್ಷಗಾನದ ಹಿರಿಯ ಕಲಾವಿದರಾದ ಅಂಬರೀಶ್ ಶೆಟ್ಟಿಯವರಿಗೆ ಗುರುವಂದನೆ ಬಳಿಕ ಯಕ್ಷಗಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ಗೌರವಧನ ನೀಡಲಾಗುವುದು. ಇನ್ನು ಪಂಜಿನಡ್ಕ ಶಾಲೆಯಲ್ಲಿ 10ನೇ ತರಗತಿಯಲ್ಲಿ 90% ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿಧನಸಹಾಯ ನೀಡಲಿದ್ದಾರೆ. ಉತ್ತಮ ಸೇವೆಗಾಗಿ 2023ನೇ ಸಾಲಿನ ರಾಜ್ಯದ ಸಿಎಂ ಅವರಿಂದ ಪದಕ ಸ್ವೀಕರಿಸಿದ ಶ್ರೀಮತಿ ಕಾತ್ಯಾಯಿನಿ ಆಳ್ವ ಇವರಿಗೆ ಸಂಮಾನ ನಡೆಯಲಿದೆ. ಇವರ ಜೊತೆಗೆ ಈ ಸಂಮಾನವನ್ನು ಉತ್ತಮ ಸಮಾಜಸೇವೆಗೈದಂತಹ ಶ್ರೀಮತಿ ರೇಖಾ ದೇವಾಡಿಗ ಪಡೆದುಕೊಳ್ಳಲಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಖ್ಯಾತ ಶನಿಪೂಜೆ ಅರ್ಥಧಾರಿ ಕಿರಣ್ ಕುಮಾರ್ ಪಡುಪಣಂಬೂರ್ ಅವರ ಬಗ್ಗೆಗಿನ ಕೃತಿ ಬಿಡುಗಡೆಗೊಳ್ಳಲಿದೆ. ಮುಖ್ಯವಾಗಿ ವಿಶೇಷ ಸನ್ಮಾನಿತರಾಗಿ ತುಳು ಹಾಗೂ ಕನ್ನಡ ಚಿತ್ರರಂಗದ ಪ್ರಸಿದ್ಧ ಕಲಾವಿದರಾದ `ಕಾಂತಾರ’ ಚಲನಚಿತ್ರ ಖ್ಯಾತಿಯ ಪ್ರಕಾಶ್ ಕೆ ತುಮಿನಾಡು ಹಾಗೂ ದೀಪಕ್ ರೈ ಪಾಣಾಜೆ ಆಗಮಿಸಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮಗಳು ಅಭಿಮತ ಟಿವಿ ಯೂಟ್ಯುಬ್ ಚಾನಲ್ನಲ್ಲಿ ನೇರಪ್ರಸಾರಗೊಳ್ಳಲಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…