ಜನ ಮನದ ನಾಡಿ ಮಿಡಿತ

Advertisement

ಲಕ್ನೋ : ಐಪಿಎಲ್‌ ನಲ್ಲಿ ರಿಷಬ್ ಪಂತ್ ಗೆ 30 ಲಕ್ಷ ದಂಡ

ಮಂಗಳವಾರ ನಡೆದಿದ್ದ ಐಪಿಎಲ್‌ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಅವರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಲಕ್ನೋ ತಂಡದ ಈ ಋತುವಿನ ಮೂರನೇ ಓವರ್ ರೇಟ್ ಅಪರಾಧವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ನಾಯಕ ಪಂತ್‌ಗೆ 30 ಲಕ್ಷ, ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 50ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್‌ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದಿನ ಆವೃತ್ತಿಯಲ್ಲಿ 3 ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡರೆ ನಾಯಕನಿಗೆ 30 ಲಕ್ಷ ರೂ. ದಂಡದ ಜತೆಗೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಮುಂಬೈ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಈ ಶಿಕ್ಷೆಗೆ ಗುರಿಯಾಗಿದ್ದರು. ಹಾಲಿ ಆವೃತ್ತಿಯ ಐಪಿಎಲ್‌ನಿಂದ ಈ ನಿಯಮ ಕೈಬಿಟ್ಟ ಕಾರಣ ಪಂತ್‌ ನಿಷೇಧ ಶಿಕ್ಷೆಯಿಂದ ಪಾರಾದರು.

ಹೊಸ ನಿಯಮದ ಪ್ರಕಾರ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್‌ ಮಾಡಿದರೆ ನಾಯಕರಿಗೆ ದಂಡ ವಿಧಿಸಿ, ಡಿಮೆರಿಟ್‌ ಅಂಕ ನೀಡಲಾಗುತ್ತದೆ. ಡಿಮೆರಿಟ್‌ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್‌ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.

 

ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ಘೋರ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದ ರಿಷಭ್‌ ಪಂತ್‌ ಭಾರೀ ಟೀಕೆಗೆ ಗುರಿಯಾಗಿದ್ದರು. 27 ಕೋಟಿ ಮೊತ್ತ ಪಡೆದರೂ 27 ರನ್‌ ಗಳಿಸಲು ಸಾಧ್ಯವಾಗಲಿಲ್ಲ ಎಂದು ನೆಟ್ಟಿಗರು ಅವರನ್ನು ಟ್ರೋಲ್‌ ಮಾಡಿದ್ದರು. ಆದರೆ ಪಂತ್‌ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಎಲ್ಲ ಟೀಕೆಗೆ ಉತ್ತರ ನೀಡಿದರು. 61 ಎಸೆತಗಳಿಂದ ಅಜೇಯ 118 ರನ್‌ ಹೊಡೆದರು. 11 ಬೌಂಡರಿ, 8 ಸಿಕ್ಸರ್‌ ಸಿಡಿಸಿ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು. ಆದರೆ ಪಂದ್ಯ ಸೋತ ಕಾರಣ ಇವರ ಶತಕ ವ್ಯರ್ಥವಾಯಿತು.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!