ಮಂಗಳವಾರ ನಡೆದಿದ್ದ ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಅವರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಲಕ್ನೋ ತಂಡದ ಈ ಋತುವಿನ ಮೂರನೇ ಓವರ್ ರೇಟ್ ಅಪರಾಧವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ನಾಯಕ ಪಂತ್ಗೆ 30 ಲಕ್ಷ, ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 50ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದಿನ ಆವೃತ್ತಿಯಲ್ಲಿ 3 ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡರೆ ನಾಯಕನಿಗೆ 30 ಲಕ್ಷ ರೂ. ದಂಡದ ಜತೆಗೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಶಿಕ್ಷೆಗೆ ಗುರಿಯಾಗಿದ್ದರು. ಹಾಲಿ ಆವೃತ್ತಿಯ ಐಪಿಎಲ್ನಿಂದ ಈ ನಿಯಮ ಕೈಬಿಟ್ಟ ಕಾರಣ ಪಂತ್ ನಿಷೇಧ ಶಿಕ್ಷೆಯಿಂದ ಪಾರಾದರು.
ಹೊಸ ನಿಯಮದ ಪ್ರಕಾರ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕರಿಗೆ ದಂಡ ವಿಧಿಸಿ, ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
ಹಾಲಿ ಆವೃತ್ತಿಯ ಐಪಿಎಲ್ನಲ್ಲಿ ಘೋರ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಿಷಭ್ ಪಂತ್ ಭಾರೀ ಟೀಕೆಗೆ ಗುರಿಯಾಗಿದ್ದರು. 27 ಕೋಟಿ ಮೊತ್ತ ಪಡೆದರೂ 27 ರನ್ ಗಳಿಸಲು ಸಾಧ್ಯವಾಗಲಿಲ್ಲ ಎಂದು ನೆಟ್ಟಿಗರು ಅವರನ್ನು ಟ್ರೋಲ್ ಮಾಡಿದ್ದರು. ಆದರೆ ಪಂತ್ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಎಲ್ಲ ಟೀಕೆಗೆ ಉತ್ತರ ನೀಡಿದರು. 61 ಎಸೆತಗಳಿಂದ ಅಜೇಯ 118 ರನ್ ಹೊಡೆದರು. 11 ಬೌಂಡರಿ, 8 ಸಿಕ್ಸರ್ ಸಿಡಿಸಿ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು. ಆದರೆ ಪಂದ್ಯ ಸೋತ ಕಾರಣ ಇವರ ಶತಕ ವ್ಯರ್ಥವಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…
ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…
ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…
ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…