ಮಂಗಳವಾರ ನಡೆದಿದ್ದ ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಅವರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಲಕ್ನೋ ತಂಡದ ಈ ಋತುವಿನ ಮೂರನೇ ಓವರ್ ರೇಟ್ ಅಪರಾಧವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ನಾಯಕ ಪಂತ್ಗೆ 30 ಲಕ್ಷ, ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 50ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದಿನ ಆವೃತ್ತಿಯಲ್ಲಿ 3 ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡರೆ ನಾಯಕನಿಗೆ 30 ಲಕ್ಷ ರೂ. ದಂಡದ ಜತೆಗೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಶಿಕ್ಷೆಗೆ ಗುರಿಯಾಗಿದ್ದರು. ಹಾಲಿ ಆವೃತ್ತಿಯ ಐಪಿಎಲ್ನಿಂದ ಈ ನಿಯಮ ಕೈಬಿಟ್ಟ ಕಾರಣ ಪಂತ್ ನಿಷೇಧ ಶಿಕ್ಷೆಯಿಂದ ಪಾರಾದರು.
ಹೊಸ ನಿಯಮದ ಪ್ರಕಾರ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕರಿಗೆ ದಂಡ ವಿಧಿಸಿ, ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
ಹಾಲಿ ಆವೃತ್ತಿಯ ಐಪಿಎಲ್ನಲ್ಲಿ ಘೋರ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಿಷಭ್ ಪಂತ್ ಭಾರೀ ಟೀಕೆಗೆ ಗುರಿಯಾಗಿದ್ದರು. 27 ಕೋಟಿ ಮೊತ್ತ ಪಡೆದರೂ 27 ರನ್ ಗಳಿಸಲು ಸಾಧ್ಯವಾಗಲಿಲ್ಲ ಎಂದು ನೆಟ್ಟಿಗರು ಅವರನ್ನು ಟ್ರೋಲ್ ಮಾಡಿದ್ದರು. ಆದರೆ ಪಂತ್ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಎಲ್ಲ ಟೀಕೆಗೆ ಉತ್ತರ ನೀಡಿದರು. 61 ಎಸೆತಗಳಿಂದ ಅಜೇಯ 118 ರನ್ ಹೊಡೆದರು. 11 ಬೌಂಡರಿ, 8 ಸಿಕ್ಸರ್ ಸಿಡಿಸಿ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು. ಆದರೆ ಪಂದ್ಯ ಸೋತ ಕಾರಣ ಇವರ ಶತಕ ವ್ಯರ್ಥವಾಯಿತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…