ಬಂಟ್ವಾಳದ ತಾಲೂಕಿನಲ್ಲಿ ಹಿಂದುತ್ವವಾದಿಗಳಿ0ದ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆಯನ್ನು ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ. ಪೊಲೀಸ್ ಇಲಾಖೆಯ ವೈಫಲ್ಯ ನೇರವಾಗಿ ಕಂಡು ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಳ್ವಿಕೆ ತರುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ನ ಅಧ್ಯಕ್ಷ ಅಶ್ರಫ್ ಕಲ್ಲೇಗ ಒತ್ತಾಯಿಸಿದ್ದಾರೆ.
ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗಷ್ಟೆ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಾದ ಬಳಿಕ ಅನೇಕ ಕಡೆ ನಡೆದ ಅವರ ಸಂತಾಪ ಸಭೆಯಲ್ಲಿ ಪ್ರತಿಕಾರದ ಭಾಷಣವನ್ನು ನೇರವಾಗಿ ಹಿಂದುತ್ವವಾದಿಗಳು ಮಾಡಿದ್ದಾರೆ. ಪುತ್ತೂರಿನಲ್ಲಿ ಭರತ್ ಕುಮ್ಮೇಲು, ಬಜ್ಜೆಯಲ್ಲಿ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಸರಕಾರವೂ ಕೂಡಾ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗೃಹಸಚಿವರಿಗೆ ಪೊಲೀಸ್ ಇಲಾಖೆಯನ್ನು ಕಂಟ್ರೋಲ್ ಮಾಡುವ ಕ್ಯಾಪಸೀಟಿ ಇಲ್ಲ. ಅತಿಥಿ ಉಪನ್ಯಾಸಕರಂತೆ ಇರುವ ಉಸ್ತುವಾರಿ ಸಚಿವರಿಂದಾಗಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಹಾಗಾಗಿ ನೈಜ ಹಿಂದುಗಳಿಗೆ, ಅಲ್ಪಸಂಖ್ಯಾತರಿಗೆ ರಸ್ತೆಯಲ್ಲಿ ನಡೆದಾಡಲು ಭಯದ ವಾತಾವರಣ ಸೃಷ್ಟಿಯಾಗಿದೆ. ಎಜೇಂಸ್ಟ್ಮೆ0ಟ್ ರಾಜಕಾರಣ ಮಾಡಿಕೊಂಡು ಬರುತ್ತಿರುವ ಸ್ಪೀಕರ್ ಸಾಹೇಬರಿಂದಾಗಿ ಇವತ್ತು ಜಿಲ್ಲೆಯಲ್ಲಿ ಕೊಲೆಯಂತ ಘಟನೆಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೂ ಕೂಡಾ ಗಡಿಬಿಡಿ ಆಕಂಡ ಅನ್ನುವರು ಅವರು ಅವರ ಹತ್ತಿರದ ಕ್ಷೇತ್ರದ ವ್ಯಕ್ತಿಯ ಹತ್ಯೆಯಾಗಿದೆ. ನಿಮ್ಮಲ್ಲಿ ಅಧಿಕಾರ ಇದೆ. ಸರಕಾರ ಇದೆ. ಈ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದಕ್ಕಾಗಿ ನಿಮ್ಮ ಕೊಡುಗೆ ಏನು ಎಂದು ಅಶ್ರಫ್ ಕಲ್ಲೇಗ ಅವರು ಪ್ರಶ್ನಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮೋನು ಬಪ್ಪಳಿಗೆ, ರಶೀದ್ ಪರ್ಲಡ್ಕ ಉಪಸ್ಥಿತರಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…