ಬಂಟ್ವಾಳದ ತಾಲೂಕಿನಲ್ಲಿ ಹಿಂದುತ್ವವಾದಿಗಳಿ0ದ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆಯನ್ನು ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ. ಪೊಲೀಸ್ ಇಲಾಖೆಯ ವೈಫಲ್ಯ ನೇರವಾಗಿ ಕಂಡು ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಳ್ವಿಕೆ ತರುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ನ ಅಧ್ಯಕ್ಷ ಅಶ್ರಫ್ ಕಲ್ಲೇಗ ಒತ್ತಾಯಿಸಿದ್ದಾರೆ.
ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗಷ್ಟೆ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಾದ ಬಳಿಕ ಅನೇಕ ಕಡೆ ನಡೆದ ಅವರ ಸಂತಾಪ ಸಭೆಯಲ್ಲಿ ಪ್ರತಿಕಾರದ ಭಾಷಣವನ್ನು ನೇರವಾಗಿ ಹಿಂದುತ್ವವಾದಿಗಳು ಮಾಡಿದ್ದಾರೆ. ಪುತ್ತೂರಿನಲ್ಲಿ ಭರತ್ ಕುಮ್ಮೇಲು, ಬಜ್ಜೆಯಲ್ಲಿ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಸರಕಾರವೂ ಕೂಡಾ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗೃಹಸಚಿವರಿಗೆ ಪೊಲೀಸ್ ಇಲಾಖೆಯನ್ನು ಕಂಟ್ರೋಲ್ ಮಾಡುವ ಕ್ಯಾಪಸೀಟಿ ಇಲ್ಲ. ಅತಿಥಿ ಉಪನ್ಯಾಸಕರಂತೆ ಇರುವ ಉಸ್ತುವಾರಿ ಸಚಿವರಿಂದಾಗಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಹಾಗಾಗಿ ನೈಜ ಹಿಂದುಗಳಿಗೆ, ಅಲ್ಪಸಂಖ್ಯಾತರಿಗೆ ರಸ್ತೆಯಲ್ಲಿ ನಡೆದಾಡಲು ಭಯದ ವಾತಾವರಣ ಸೃಷ್ಟಿಯಾಗಿದೆ. ಎಜೇಂಸ್ಟ್ಮೆ0ಟ್ ರಾಜಕಾರಣ ಮಾಡಿಕೊಂಡು ಬರುತ್ತಿರುವ ಸ್ಪೀಕರ್ ಸಾಹೇಬರಿಂದಾಗಿ ಇವತ್ತು ಜಿಲ್ಲೆಯಲ್ಲಿ ಕೊಲೆಯಂತ ಘಟನೆಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೂ ಕೂಡಾ ಗಡಿಬಿಡಿ ಆಕಂಡ ಅನ್ನುವರು ಅವರು ಅವರ ಹತ್ತಿರದ ಕ್ಷೇತ್ರದ ವ್ಯಕ್ತಿಯ ಹತ್ಯೆಯಾಗಿದೆ. ನಿಮ್ಮಲ್ಲಿ ಅಧಿಕಾರ ಇದೆ. ಸರಕಾರ ಇದೆ. ಈ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದಕ್ಕಾಗಿ ನಿಮ್ಮ ಕೊಡುಗೆ ಏನು ಎಂದು ಅಶ್ರಫ್ ಕಲ್ಲೇಗ ಅವರು ಪ್ರಶ್ನಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮೋನು ಬಪ್ಪಳಿಗೆ, ರಶೀದ್ ಪರ್ಲಡ್ಕ ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…