ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನಲ್ಲಿ ಜೂ.1ರಿಂದ ಶ್ರೀಮದ್ಭಾಗವತ ಪ್ರವಚನ ಸಪ್ತಾಹ

ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ ಸಂಜೆ 6ರಿಂದ 8 ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿಯ ಬಲರಾಮ ಆಚಾರ್ಯ ಮತ್ತು ಬಹುವಚನಂ ಸಂಸ್ಥೆಯ ಡಾ. ಶ್ರೀಶ ಕುಮಾರ್ ಎಂ. ಕೆ. ಹೇಳಿದ್ದಾರೆ.

ಪುತ್ತೂರಿನಲ್ಲಿ ಮೊದಲ ಬಾರಿಗೆ ಶ್ರೀ ವೇದವ್ಯಾಸ ವಿರಚಿತ ಪುರಾಣರಾಜ ಶ್ರೀಮದ್ಭಾಗವತ ಪ್ರವಚನವನ್ನು ಖ್ಯಾತ ವಾಗ್ಮಿ ವೀಣಾ ಬನ್ನಂಜೆ ನಡೆಸಲಿದ್ದಾರೆ. ಸನಾತನ ಧರ್ಮದ ಅರಿವನ್ನು ನೀಡುವ ನಿಟ್ಟಿನಲ್ಲಿ ಪ್ರವಚನವನ್ನು ಏರ್ಪಡಿಸಲಾಗಿದ್ದು, 600ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಮುಂದಿನ ಪೀಳಿಗೆಗೆ ವಿಚಾರಗಳನ್ನು ಉಳಿಸಿಕೊಂಡು ಹೋಗುವ ಕಾರ್ಯ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ರು. ಶ್ರೀಮದ್ಭಾಗವತದ ಸಾರವನ್ನು ತಿಳಿಸುವ ಕಾರ್ಯ ನಡೆಯಲಿದ್ದು, ಆಧ್ಯಾತ್ಮದ ಕಡೆಗೆ ಒಲವಿರುವ ಪ್ರತಿಯೊಬ್ಬರು ಪ್ರವಚನದಲ್ಲಿ ಭಾಗವಹಿಸಬಹುದಾಗಿದೆ. ಜನರ ಆಸಕ್ತಿಯನ್ನು ಗಮನಿಸಿಕೊಂಡು ಪ್ರವಚನವನ್ನು ಮುಂದಿನ ದಿನ ಮುಂದುವರಿಸುವ ನಿರ್ಧಾರ ಮಾಡಲಾಗುವುದು ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಸ್ವಾಮಿ ಕಲಾ ಮಂದಿರದ ಮಾಧವ ಸ್ವಾಮಿ, ಬಹುವಚನಂ ಸಂಸ್ಥೆಯ ಡಾ.ಶ್ರೀಶ ಕುಮಾರ್ ಎಂ.ಕೆ. ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!