ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ ಸಂಜೆ 6ರಿಂದ 8 ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿಯ ಬಲರಾಮ ಆಚಾರ್ಯ ಮತ್ತು ಬಹುವಚನಂ ಸಂಸ್ಥೆಯ ಡಾ. ಶ್ರೀಶ ಕುಮಾರ್ ಎಂ. ಕೆ. ಹೇಳಿದ್ದಾರೆ.
ಪುತ್ತೂರಿನಲ್ಲಿ ಮೊದಲ ಬಾರಿಗೆ ಶ್ರೀ ವೇದವ್ಯಾಸ ವಿರಚಿತ ಪುರಾಣರಾಜ ಶ್ರೀಮದ್ಭಾಗವತ ಪ್ರವಚನವನ್ನು ಖ್ಯಾತ ವಾಗ್ಮಿ ವೀಣಾ ಬನ್ನಂಜೆ ನಡೆಸಲಿದ್ದಾರೆ. ಸನಾತನ ಧರ್ಮದ ಅರಿವನ್ನು ನೀಡುವ ನಿಟ್ಟಿನಲ್ಲಿ ಪ್ರವಚನವನ್ನು ಏರ್ಪಡಿಸಲಾಗಿದ್ದು, 600ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಮುಂದಿನ ಪೀಳಿಗೆಗೆ ವಿಚಾರಗಳನ್ನು ಉಳಿಸಿಕೊಂಡು ಹೋಗುವ ಕಾರ್ಯ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ರು. ಶ್ರೀಮದ್ಭಾಗವತದ ಸಾರವನ್ನು ತಿಳಿಸುವ ಕಾರ್ಯ ನಡೆಯಲಿದ್ದು, ಆಧ್ಯಾತ್ಮದ ಕಡೆಗೆ ಒಲವಿರುವ ಪ್ರತಿಯೊಬ್ಬರು ಪ್ರವಚನದಲ್ಲಿ ಭಾಗವಹಿಸಬಹುದಾಗಿದೆ. ಜನರ ಆಸಕ್ತಿಯನ್ನು ಗಮನಿಸಿಕೊಂಡು ಪ್ರವಚನವನ್ನು ಮುಂದಿನ ದಿನ ಮುಂದುವರಿಸುವ ನಿರ್ಧಾರ ಮಾಡಲಾಗುವುದು ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಸ್ವಾಮಿ ಕಲಾ ಮಂದಿರದ ಮಾಧವ ಸ್ವಾಮಿ, ಬಹುವಚನಂ ಸಂಸ್ಥೆಯ ಡಾ.ಶ್ರೀಶ ಕುಮಾರ್ ಎಂ.ಕೆ. ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…