ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ ಸಂಜೆ 6ರಿಂದ 8 ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿಯ ಬಲರಾಮ ಆಚಾರ್ಯ ಮತ್ತು ಬಹುವಚನಂ ಸಂಸ್ಥೆಯ ಡಾ. ಶ್ರೀಶ ಕುಮಾರ್ ಎಂ. ಕೆ. ಹೇಳಿದ್ದಾರೆ.
ಪುತ್ತೂರಿನಲ್ಲಿ ಮೊದಲ ಬಾರಿಗೆ ಶ್ರೀ ವೇದವ್ಯಾಸ ವಿರಚಿತ ಪುರಾಣರಾಜ ಶ್ರೀಮದ್ಭಾಗವತ ಪ್ರವಚನವನ್ನು ಖ್ಯಾತ ವಾಗ್ಮಿ ವೀಣಾ ಬನ್ನಂಜೆ ನಡೆಸಲಿದ್ದಾರೆ. ಸನಾತನ ಧರ್ಮದ ಅರಿವನ್ನು ನೀಡುವ ನಿಟ್ಟಿನಲ್ಲಿ ಪ್ರವಚನವನ್ನು ಏರ್ಪಡಿಸಲಾಗಿದ್ದು, 600ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಮುಂದಿನ ಪೀಳಿಗೆಗೆ ವಿಚಾರಗಳನ್ನು ಉಳಿಸಿಕೊಂಡು ಹೋಗುವ ಕಾರ್ಯ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ರು. ಶ್ರೀಮದ್ಭಾಗವತದ ಸಾರವನ್ನು ತಿಳಿಸುವ ಕಾರ್ಯ ನಡೆಯಲಿದ್ದು, ಆಧ್ಯಾತ್ಮದ ಕಡೆಗೆ ಒಲವಿರುವ ಪ್ರತಿಯೊಬ್ಬರು ಪ್ರವಚನದಲ್ಲಿ ಭಾಗವಹಿಸಬಹುದಾಗಿದೆ. ಜನರ ಆಸಕ್ತಿಯನ್ನು ಗಮನಿಸಿಕೊಂಡು ಪ್ರವಚನವನ್ನು ಮುಂದಿನ ದಿನ ಮುಂದುವರಿಸುವ ನಿರ್ಧಾರ ಮಾಡಲಾಗುವುದು ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಸ್ವಾಮಿ ಕಲಾ ಮಂದಿರದ ಮಾಧವ ಸ್ವಾಮಿ, ಬಹುವಚನಂ ಸಂಸ್ಥೆಯ ಡಾ.ಶ್ರೀಶ ಕುಮಾರ್ ಎಂ.ಕೆ. ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…