ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ ಸಂಜೆ 6ರಿಂದ 8 ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿಯ ಬಲರಾಮ ಆಚಾರ್ಯ ಮತ್ತು ಬಹುವಚನಂ ಸಂಸ್ಥೆಯ ಡಾ. ಶ್ರೀಶ ಕುಮಾರ್ ಎಂ. ಕೆ. ಹೇಳಿದ್ದಾರೆ.
ಪುತ್ತೂರಿನಲ್ಲಿ ಮೊದಲ ಬಾರಿಗೆ ಶ್ರೀ ವೇದವ್ಯಾಸ ವಿರಚಿತ ಪುರಾಣರಾಜ ಶ್ರೀಮದ್ಭಾಗವತ ಪ್ರವಚನವನ್ನು ಖ್ಯಾತ ವಾಗ್ಮಿ ವೀಣಾ ಬನ್ನಂಜೆ ನಡೆಸಲಿದ್ದಾರೆ. ಸನಾತನ ಧರ್ಮದ ಅರಿವನ್ನು ನೀಡುವ ನಿಟ್ಟಿನಲ್ಲಿ ಪ್ರವಚನವನ್ನು ಏರ್ಪಡಿಸಲಾಗಿದ್ದು, 600ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಮುಂದಿನ ಪೀಳಿಗೆಗೆ ವಿಚಾರಗಳನ್ನು ಉಳಿಸಿಕೊಂಡು ಹೋಗುವ ಕಾರ್ಯ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ರು. ಶ್ರೀಮದ್ಭಾಗವತದ ಸಾರವನ್ನು ತಿಳಿಸುವ ಕಾರ್ಯ ನಡೆಯಲಿದ್ದು, ಆಧ್ಯಾತ್ಮದ ಕಡೆಗೆ ಒಲವಿರುವ ಪ್ರತಿಯೊಬ್ಬರು ಪ್ರವಚನದಲ್ಲಿ ಭಾಗವಹಿಸಬಹುದಾಗಿದೆ. ಜನರ ಆಸಕ್ತಿಯನ್ನು ಗಮನಿಸಿಕೊಂಡು ಪ್ರವಚನವನ್ನು ಮುಂದಿನ ದಿನ ಮುಂದುವರಿಸುವ ನಿರ್ಧಾರ ಮಾಡಲಾಗುವುದು ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಸ್ವಾಮಿ ಕಲಾ ಮಂದಿರದ ಮಾಧವ ಸ್ವಾಮಿ, ಬಹುವಚನಂ ಸಂಸ್ಥೆಯ ಡಾ.ಶ್ರೀಶ ಕುಮಾರ್ ಎಂ.ಕೆ. ಉಪಸ್ಥಿತರಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…