ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಟೌನ್ಹಾಲ್ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಪುರಸ್ಕರಿಸಿ ಮಾತನಾಡಿದ ಅವರು, ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.
ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.
ಯೋಧರ ಕ್ಯಾಂಟೀನ್ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…