ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಜೀವಬಿಟ್ಟಿರೋ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ.ಕೆ.ವಿ. ಮೃತ ವಿದ್ಯಾರ್ಥಿನಿಯಾಗಿದ್ದಾಳೆ.
ಮೃತ ಕವನ.ಕೆ.ವಿ. ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿಯಾಗಿದ್ದಾರೆ. ಕವನ ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ಲು. ಈಗಾಗಲೇ ಕವನ.ಕೆ.ವಿ. ಮೂರು ವಿಷಯಗಳ ಪರೀಕ್ಷೆ ಬರೆದಿದ್ರು. ಇನ್ನೂ ಮೂರು ಎಕ್ಸಾಂಗಳನ್ನು ಬರೆಯಬೇಕಿತ್ತು. ನಾಳೆ ನಾಲ್ಕನೇ ವಿಷಯದ ಪರೀಕ್ಷೆ ಬರೆಯಬೇಕಿದ್ದು, ಸಂಜೆ ಮನೆಗೆ ನೀರು ತರುತ್ತಿದ್ದಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.ಹೀಗಾಗಿ ತಾಯಿ ಬಳಿ ಕುಡಿಯಲು ನೀರು ಕೇಳಿದ್ದರಂತೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದರಂತೆ. ಆ ಕೂಡಲೇ ಪೋಷಕರು ಕವನಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಕವನ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಮುದ್ದಾದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಷ್ಟೇ ಅಲ್ಲದೇ ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿ ಶೋಕ ಮಡುಗಟ್ಟಿದೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…