ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಭರತ್ ಕುಮ್ಡೇಲ್‌ನನ್ನು 24 ಗಂಟೆಯ ಒಳಗಡೆ ಬಂಧಿಸದಿದ್ದರೆ ‘ಎಸ್ಪಿ ಕಚೇರಿ ಚಲೋ’ ನಡೇಸುವುದಾಗಿ ಎಸ್.ಡಿ.ಪಿ.ಐ. ಎಚ್ಚರಿಕೆ ನೀಡಿದೆ.

ಪಿಕ್‌ಅಪ್ ವಾಹನದ ಚಾಲಕ ಅಬ್ದುಲ್ ರಹೀಂ ಹತ್ಯೆ ಸೂತ್ರಧಾರ ಭರತ್ ಕುಮ್ಡೇಲ್‌ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24 ಗಂಟೆಯ ಒಳಗಡೆ ಬಂಧಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಚಲೋ ಸಹಿತ ದ.ಕ. ಜಿಲ್ಲಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ಎಸ್‌ಡಿಪಿಐ ದ.ಕ. ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಅಲಿ ಎಚ್ಚರಿಕೆ ನೀಡಿದ್ದಾರೆ.

ಗ್ಯಾಂಗ್‌ವಾರ್‌ನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಮುಸ್ಲಿಂ ಯುವಕರ ಹತ್ಯಾಯತ್ನ ನಡೆದಿತ್ತು. ಅಲ್ಲದೆ ಸಂಘಪರಿವಾರದ ನಾಯಕರಾದ ಭರತ್ ಕುಮ್ಡೇಲ್, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವು ಸಂಘ ಪರಿವಾರದ ನಾಯಕರು ಹತ್ಯೆಗೆ ಪ್ರತೀಕಾರ ನಡೆಸುತ್ತೇವೆ ಎಂದು ಬಹಿರಂಗವಾಗಿ ಭಾಷಣಗೈದು ಮುಸ್ಲಿಂ ಯುವಕರ ಹತ್ಯೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರು. ಆದರೂ ಕೂಡ ಪೋಲಿಸ್ ಇಲಾಖೆ ಹಾಗೂ ಸರಕಾರ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿಲ್ಲ. ಅದರ ಪರಿಣಾಮ ಕೊಳ್ತಮಜಲುವಿನಲ್ಲಿ ಅಬ್ದುಲ್ ರಹೀಂ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭರತ್ ಕುಮ್ಡೇಲ್‌ನ ಕೈವಾಡ ಇರುವುದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಕೂಡ ಈತನಕ ಈತನ ಮೇಲೆ ಕ್ರಮವಾಗಿಲ್ಲ. ಗುರುವಾರ ಸಂಜೆಯೊಳಗೆ ಈತನ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಎಸ್ಪಿಕಚೇರಿ ಚಲೋ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳ ಸ್ಥಳಾಂತರಕ್ಕೆ ಮುಸ್ಲಿಂ ನಾಯಕರು ಇಟ್ಟಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಒಪ್ಪಿದ್ದಾರೆ ಮತ್ತು ಶೀಘ್ರವೇ ಹೊಸ ಅಧಿಕಾರಿಗಳ ನೇಮಕ ಆಗಲಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಈ ಬಗ್ಗೆ ಪೋಸ್ಟರುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!